Thursday, June 11, 2026
Thursday, June 11, 2026

ಜೆಡಿಎಸ್ ಶಾಸಕರಿಂದ ಅಡ್ಡಮತದಾನ ಸ್ಪಷ್ಟ

Date:

ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರು ಕಾಂಗ್ರೆಸ್‍ಗೆ ಮತ ಚಲಾಯಿಸಿದ್ದಾರೆ. ಈ ಮೂಲಕ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಅಡ್ಡ ಮತದಾನ ನಡೆಯಬಹುದೆಂಬ ಅನುಮಾನಕ್ಕೆ ಶ್ರೀನಿವಾಸ್ ಗೌಡ ಅವರೇ ಮುನ್ನುಡಿ ಬರೆದಿದ್ದಾರೆ.

ವಿಧಾನಸೌಧಕ್ಕೆ ಆಗಮಿಸಿದ ಅವರು ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಹಕ್ಕು ಚಲಾಯಿಸಿರುವುದನ್ನು ಶ್ರೀನಿವಾಸ್ ಗೌಡ ಅವರೇ ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದರು. ಈ ದಿಢೀರ್ ಬೆಳವಣಿಗೆಯಿಂದಾಗಿ ಜೆಡಿಎಸ್‍ನ ಒಟ್ಟು 32 ಮತಗಳ ಪೈಕಿ 1 ಮತ ಕೈ ಕೊಟ್ಟಿರುವುದು ಸಾಬೀತಾಗಿದೆ. ಕೆಲ ತಿಂಗಳಿಂದ ಶ್ರೀನಿವಾಸ್ ಗೌಡ ಅವರು ಜೆಡಿಎಸ್ ಜೊತೆ ಸಂಬಂಧ ಅಷ್ಟಕಷ್ಟೇ ಎಂಬಂತಿತ್ತು.

ಶಾಸನಸಭೆಯಲ್ಲಿ ನಡೆಯುವ ಮತದಾನದ ವೇಳೆ ಮಾತ್ರ ಇದು ಅನ್ವಯವಾಗುತ್ತದೆ. ಶಾಸನಸಭೆಯಿಂದ ಆಚೆ ನಡೆಯುವ ಯಾವುದೇ ಚುನಾವಣೆಗೂ ಕಾಯ್ದೆಯನ್ನು ಶಾಸಕರ ಮೇಲೆ ಪ್ರಯೋಗಿಸಲು ಸಾಧ್ಯವಿಲ್ಲ ಎನ್ನಲಾಗುತ್ತಿದೆ.

ಪಕ್ಷದ ಹಿರಿಯರಾದ ನನ್ನನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಹೀಗಾಗಿ ನಾನು ಜೆಡಿಎಸ್‍ಗೆ ಗುಡ್ ಬೈ ಹೇಳುತ್ತೇನೆ ಎಂದು ಮಾಧ್ಯಮಗಳ ಮುಂದೆ ತಿಳಿಸಿದ್ದಾರೆ. ಇದಕ್ಕೂ ಮುನ್ನ ಶಾಸಕ ರಮೇಶ್‍ಕುಮಾರ್ ಅವರು ಶ್ರೀನಿವಾಸ್ ಗೌಡ ಅವರನ್ನು ಭೇಟಿಯಾಗಿ ಗೌಪ್ಯವಾಗಿ ಮಾತುಕತೆ ನಡೆಸಿದರು.

ಇದು ಫಲಪ್ರದವಾಗಿದ್ದರಿಂದಲೇ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Vaccination Day ಜೂನ್ 28, ಭಾನುವಾರ “ರಾಷ್ಟ್ರೀಯ ಲಸಿಕಾ ದಿನ”-ರಿತ್ವಿಕ್ ಪಾಂಡೆ

National Vaccination Day ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ...

B.Y. Raghavendra ಸಂಸದ ರಾಘವೇಂದ್ರರಿಂದ ಮಾಚೇನಹಳ್ಳಿ ಕೈಗಾರಿಕಾ ಘಟಕಗಳಿಗೆ ಭೇಟಿ

B.Y. Raghavendra ಶಿವಮೊಗ್ಗದ ಕೈಗಾರಿಕಾ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿರುವ...

S.N. Channabasappa ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಸುಸಜ್ಜಿತ ರಸ್ತೆ ಸಂಪರ್ಕ, ಸಂಚಾರ ಸುಗಮ ಅವಕಾಶಕ್ಕೆ ಆದ್ಯತೆ- ಶಾಸಕ ಚೆನ್ನಿ

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸುಸಜ್ಜಿತ ರಸ್ತೆ ಸಂಪರ್ಕ...