Tuesday, August 25, 2026
Tuesday, August 25, 2026

ನೂಪುರ್ ಶರ್ಮಾ ಹೇಳಿಕೆ: ಘರ್ಷಣೆ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮ

Date:

ನೂಪೂರ್ ಶರ್ಮಾ ಅವರು ಅವಹೇಳನಕಾರಿ ಹೇಳಿಕೆ ನೀಡಿರುವ ಕುರಿತು ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಘರ್ಷಣೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಎಲ್ಲಾ ಸಮುದಾಯಗಳ ನಾಯಕರೊಂದಿಗೆ ಮಾತುಕತೆ ನಡೆಸಿ, ಸೌಹಾರ್ದತೆಯನ್ನು ಕಾಪಾಡುವಂತೆ ಪೊಲೀಸ್ ಇನ್ಸಪೆಕ್ಟರ್ ಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯದಲ್ಲಿ ಪ್ರಸ್ತುತ ಪರಿಸ್ಥಿತಿ ಶಾಂತಿಯುತವಾಗಿದ್ದು, ನಿಯಂತ್ರಣದಲ್ಲಿದೆ. ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶಗಳಿಗೆ ಪೊಲೀಸ್ ತುಕಡಿಗಳ ನಿಯೋಜನೆಗೆ ಸೂಚನೆ ನೀಡಲಾಗಿದೆ. ಈಗಾಗಲೇ ಕೆ.ಎಸ್.ಆರ್.ಪಿ ತುಕಡಿಗಳ ಚಲನೆ ಪ್ರಾರಂಭವಾಗಿದೆ. ಹುಬ್ಬಳ್ಳಿ ಪೊಲೀಸ್ ಆಯುಕ್ತರು ಮತ್ತು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...