Monday, February 2, 2026
Monday, February 2, 2026

ಆ್ಯಸಿಡ್ ಧಾಳಿ ಬಗ್ಗೆ ಕಠಿಣ ಕ್ರಮಕ್ಕೆ ಸೂಚನೆ- ಬೊಮ್ಮಾಯಿ

Date:

ರಾಜ್ಯದಲ್ಲಿ ಆ್ಯಸಿಡ್ ದಾಳಿಗಳು ಹೆಚ್ಚಾಗುತ್ತಿದೆ. ಆ್ಯಸಿಡ್ ದಾಳಿ ವಿರುದ್ಧ ಕಠಿಣ ಕಾನೂನು ರೂಪಿಸಲು ಕಾನೂನು ಸಚಿವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ, ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆ್ಯಸಿಡ್ ದಾಳಿ ವಿರುದ್ಧ ಕಠಿಣ ಕಾನೂನು ರೂಪಿಸಲು ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದ ಹಾಗೇ ನೋಡಿಕೊಳ್ಳಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಗಲಾಟೆ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಈಗಾಗಲೇ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳ ಸಭೆ ಕರೆದು ಸೂಚನೆ ನೀಡಿದ್ದೇನೆ.

ರಾಜ್ಯದಲ್ಲಿ ಶಾಂತ ಪರಿಸ್ಥಿತಿ ಇದೆ.ಎಲ್ಲಾ ಸಮುದಾಯದ ನಾಯಕರು ಸೌಹಾರ್ದತೆ ಕಾಪಾಡಬೇಕೆಂದು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...