Wednesday, October 2, 2024
Wednesday, October 2, 2024

ಸಮಾಜಘಾತುಕರಿಗೆ ಯುಪಿಯಲ್ಲಿ ಬುಲ್ಡೋಜರ್ ಕ್ರಮ ಜಾರಿ

Date:

ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮಹಮ್ಮದ್ ಅವರ ಕುರಿತು ನೀಡಿದ ನಿಂದನಾತ್ಮಕ ಹೇಳಿಕೆ ವಿರುದ್ಧ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಒಂದು ದಿನದ ಬಳಿಕ, ಉತ್ತರ ಪ್ರದೇಶ ಪೊಲೀಸರು ಸಹರಾನ್‌ಪುರದಲ್ಲಿ ಪ್ರತಿಭಟನಾಕಾರರ ಮನೆಗಳನ್ನು ಬುಲ್ಡೋಝರ್‌ ಬಳಸಿ ನೆಲಸಮಗೊಳಿಸಿದ್ದಾರೆ ಎಂದು Ndtv.com ವರದಿ ಮಾಡಿದೆ.

ಸಹರಾನ್‌ ಪುರದಲ್ಲಿ ಶಾಂತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡಿದ್ದಕ್ಕಾಗಿ ಇದುವರೆಗೆ 64 ಜನರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಭಾರೀ ಪೊಲೀಸ್ ನಿಯೋಜನೆಯ ನಡುವೆ ಬುಲ್ಡೋಜರ್‌ಗಳು ಎರಡು ಮನೆಗಳನ್ನು ಕೆಡವುತ್ತಿರುವುದು ವೈರಲ್‌ ಆದ ವಿಡಿಯೋದಲ್ಲಿ ದಾಖಲಾಗಿದೆ.
ಇಬ್ಬರು ಬಿಜೆಪಿ ನಾಯಕರು ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಆಕ್ಷೇಪಾರ್ಹ ಮತ್ತು ಕೋಮುವಾದಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದ್ದು, ರಾಜ್ಯದಲ್ಲಿ ಇದುವರೆಗೆ 230 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಏಳು ಜಿಲ್ಲೆಗಳಲ್ಲಿ 11 ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ಸ್ಥಳೀಯ ಆಡಳಿತದೊಂದಿಗೆ ಆರೋಪಿ ಮುಝಮ್ಮಿಲ್ ಮತ್ತು ಅಬ್ದುಲ್ ವಾಕಿರ್ ಅವರ ನಿವಾಸಗಳನ್ನು ತಲುಪಿದ ಪೊಲೀಸರು ಅಕ್ರಮ ನಿರ್ಮಾಣಗಳು ಎಂದು ಆರೋಪಿಸಿ ಅವರ ಮನೆಗಳ ಭಾಗಗಳನ್ನು ನೆಲಸಮಗೊಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಯುಪಿ ಪೊಲೀಸ್‌ನ ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್, ರಾಜ್ಯದಲ್ಲಿ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...