Monday, May 4, 2026
Monday, May 4, 2026

ಸಮಾಜಘಾತುಕರಿಗೆ ಯುಪಿಯಲ್ಲಿ ಬುಲ್ಡೋಜರ್ ಕ್ರಮ ಜಾರಿ

Date:

ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮಹಮ್ಮದ್ ಅವರ ಕುರಿತು ನೀಡಿದ ನಿಂದನಾತ್ಮಕ ಹೇಳಿಕೆ ವಿರುದ್ಧ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಒಂದು ದಿನದ ಬಳಿಕ, ಉತ್ತರ ಪ್ರದೇಶ ಪೊಲೀಸರು ಸಹರಾನ್‌ಪುರದಲ್ಲಿ ಪ್ರತಿಭಟನಾಕಾರರ ಮನೆಗಳನ್ನು ಬುಲ್ಡೋಝರ್‌ ಬಳಸಿ ನೆಲಸಮಗೊಳಿಸಿದ್ದಾರೆ ಎಂದು Ndtv.com ವರದಿ ಮಾಡಿದೆ.

ಸಹರಾನ್‌ ಪುರದಲ್ಲಿ ಶಾಂತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡಿದ್ದಕ್ಕಾಗಿ ಇದುವರೆಗೆ 64 ಜನರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಭಾರೀ ಪೊಲೀಸ್ ನಿಯೋಜನೆಯ ನಡುವೆ ಬುಲ್ಡೋಜರ್‌ಗಳು ಎರಡು ಮನೆಗಳನ್ನು ಕೆಡವುತ್ತಿರುವುದು ವೈರಲ್‌ ಆದ ವಿಡಿಯೋದಲ್ಲಿ ದಾಖಲಾಗಿದೆ.
ಇಬ್ಬರು ಬಿಜೆಪಿ ನಾಯಕರು ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಆಕ್ಷೇಪಾರ್ಹ ಮತ್ತು ಕೋಮುವಾದಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದ್ದು, ರಾಜ್ಯದಲ್ಲಿ ಇದುವರೆಗೆ 230 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಏಳು ಜಿಲ್ಲೆಗಳಲ್ಲಿ 11 ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ಸ್ಥಳೀಯ ಆಡಳಿತದೊಂದಿಗೆ ಆರೋಪಿ ಮುಝಮ್ಮಿಲ್ ಮತ್ತು ಅಬ್ದುಲ್ ವಾಕಿರ್ ಅವರ ನಿವಾಸಗಳನ್ನು ತಲುಪಿದ ಪೊಲೀಸರು ಅಕ್ರಮ ನಿರ್ಮಾಣಗಳು ಎಂದು ಆರೋಪಿಸಿ ಅವರ ಮನೆಗಳ ಭಾಗಗಳನ್ನು ನೆಲಸಮಗೊಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಯುಪಿ ಪೊಲೀಸ್‌ನ ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್, ರಾಜ್ಯದಲ್ಲಿ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...