Monday, August 24, 2026
Monday, August 24, 2026

ಚಿಂತಾಜನಕ ಸ್ಥಿತಿಯಲ್ಲಿ ಪಾಕ್ ಮಾಜಿ ಅಧ್ಯಕ್ಷ ಮುಷ್ರಫ್

Date:

ಗಂಭೀರ ಅನಾರೋಗ್ಯದ ಕಾರಣದಿಂದಾಗಿ ಸಾಕಷ್ಟು ವರ್ಷಗಳಿಂದ ದುಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಸುದ್ದಿ ವೈರಲ್ ಆಗಿವೆ.

ಗಂಭೀರ ಆರೋಗ್ಯ ಸಮಸ್ಯೆಗಳಿಂದಾಗಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ (ನಿವೃತ್ತ) ಪರ್ವೇಜ್ ಮುಷರಫ್ಅವರನ್ನು ದುಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈದ್ಯಕೀಯ ವರದಿಗಳ ಪ್ರಕಾರ, ಮುಷರಫ್ ಹೃದಯ ಮತ್ತು ರಕ್ತದೊತ್ತಡದ ಸಮಸ್ಯೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

2016 ರಿಂದಲೂ ವೈದ್ಯಕೀಯ ಚಿಕಿತ್ಸೆಯ ಕಾರಣದಿಂದಾಗಿ ಅವರು ದುಬೈನಲ್ಲಿ ವಾಸ ಮಾಡುತ್ತಿದ್ದರು. ಅಂದಿನಿಂದ ಅವರು ಸ್ವದೇಶವಾದ ಪಾಕಿಸ್ತಾನಕ್ಕೂ ಮರಳಿರಲಿಲ್ಲ. ಪಾಕಿಸ್ತಾನದಲ್ಲಿ ಪರ್ವೇಜ್ ಮುಷರಫ್ ವಿರುದ್ಧ ದೇಶದ್ರೋಹದ ಪ್ರಕರಣವೂ ದಾಖಲಾಗಿತ್ತು. ವಿಚಾರಣೆಗೆ ಸ್ವದೇಶಕ್ಕೆ ಆಗಮಿಸುವಂತೆ ಕೋರ್ಟ್ ಹಲವು ಬಾರಿ ನೋಟಿಸ್ ನೀಡಿತ್ತು.

ಪಾಕಿಸ್ತಾನದ ಮಾಜಿ ಅಧ್ಯಕ್ಷ ತೀವ್ರ ಅನಾರೋಗ್ಯದಿಂದ
ಮುಷ್ರಫ್ ದುಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಹಿತಿ; ಪರ್ವೇಜ್ ಮುಷರಫ್ ಅವರು ಅಮೈಲೋಯಿ ಡೊಸೀಸ್ (Amyloidosis) ಎಂಬ ಅಪರೂಪದ ಕಾಯಿಲೆಗೆ ತುತ್ತಾಗಿದ್ದಾರೆ. ಇದು ಪ್ರೋಟೀನ್ ಗಳ ಅಸಾಧಾರಣ ಬೆಳವಣಿಗೆಯಿಂದ ಜೀವಕೋಶದ ಕಾರ್ಯವಿಧಾನವನ್ನು ಬದಲಾಯಿಸುವ ಪ್ರಕ್ರಿಯೆ ಒಳಗೊಂಡಿದೆ. ಫೋಟ್ರೀಸ್ ಹಿರಾನಂದನ್‌ ಆಸ್ಪತ್ರೆಯ ವೈದ್ಯರಾದ ಡಾ. ಅಥುಲ್ ಇಂಗಲೆ‌ ಅವರು ಈ ಕಾಯಿಲೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಮುಷ್ರಫ್ ಅವರ ಕುಟುಂಬದ ಸದಸ್ಯರು ಟ್ವಿಟರ್ ನಲ್ಲಿ ತಿಳಿಸಿರುವಂತೆ ನಿಧನದ ಸುದ್ದಿ ಅಲ್ಲಗೆಳೆದಿದ್ದಾರೆ. ಮುಷ್ರಫ್ ಅವರು ವೆಂಟಿಲೇಟರ್ ನಲ್ಲಿ ಇಲ್ಲ. ಕಳೆದ ಮೂರು ವಾರಗಳಿಂದ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಹೇಳಿದ್ದಾರೆ. ನಿಧನದ ಬಗ್ಗೆ ಅಧಿಕೃತ ಹೇಳಿಕೆ ಬಂದಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...