Friday, March 6, 2026
Friday, March 6, 2026

ಗಡಿರೇಖೆಯಲ್ಲಿ ಉದ್ವಿಗ್ನತೆ: ಭಾರತದ ಮೇಲೆ ಗೂಬೆ ಕೂರಿಸಿದ ಚೀನಾ

Date:

ಭಾರತ ಮತ್ತು ಚೀನ ನಡುವಿನ ನೈಜ ಗಡಿ ರೇಖೆಯಲ್ಲಿ ಗಡಿಯಲ್ಲಿ ಆಗಾಗ ಉಂಟಾಗುತ್ತಿರುವ ಶಾಂತಿ ಭಂಗದ ಪ್ರಕರಣಗಳಿಗೆ, ಅಲ್ಲಿ ಎದ್ದಿರುವ ಉದ್ವಿಗ್ನತೆಗೆ ಭಾರತವೇ ಕಾರಣ ಎಂದು ಚೀನದ ವಿದೇಶಾಂಗ ಸಚಿವ ವೀ ಫೆಂಘೆ ಆರೋಪಿಸಿದ್ದಾರೆ.

ಸಿಂಗಾಪುರದಲ್ಲಿ ನಡೆದ ಶಾಂಗ್ರಿ ಲಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ಘರ್ಷಣೆಗೆ ಪ್ರಚೋದನೆ ನೀಡಿದ್ದೇ ಭಾರತ ಎಂಬುದು ನಮಗೆ ತಿಳಿದುಬಂದಿದೆ. ಗಡಿಯಲ್ಲಿ ಭಾರತ ಹೆಚ್ಚೆಚ್ಚು ಶಸ್ತ್ರಾಸ್ತ್ರಗಳನ್ನು ಜಮಾವಣೆ ಮಾಡಿದ್ದಲ್ಲದೆ, ಹೆಚ್ಚುವರಿ ಯೋಧರನ್ನು ಚೀನ ಗಡಿಯ ಕಡೆಗೆ ರವಾನಿಸಿದೆ. ಇಂಥ ಘಟನೆಗಳು ಘರ್ಷಣೆಗೆ ಪ್ರೇರಣೆ ನೀಡುತ್ತವೆ” ಎಂದಿದ್ದಾರೆ.
ಎಲ್‌ಎಸಿಯಲ್ಲಿ ಚೀನ ಸೈನಿಕರಿಂದ ಶಾಂತಿ ಭಂಗವಾಗುವ ನಿಟ್ಟಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಭಾರತವೇ ನೇರ ಹೊಣೆ.
ಆಗಾಗ ಅಲ್ಲಿ ಆಗಿರುವ ಗಲಭೆಗಳಿಗೆ ಭಾರತವೇ ಕಾರಣ ಎಂದರು.

ಸಂವಾದದಲ್ಲಿ ಹಾಜರಿದ್ದ ಅಮೆರಿಕದ ಚಿಂತಕರ ಚಾವಡಿಯ ಸದಸ್ಯರಾದ ಡಾ. ತನ್ವಿ ಮದನ್‌, “ಎಲ್‌ಎಸಿಯಲ್ಲಿ 2 ವರ್ಷಗಳ ಹಿಂದೆ ಚೀನ ಸೈನಿಕರು ಶಾಂತಿ ಉಲ್ಲಂಘಿಸಿದ್ದರು. ಈಗಲೂ ಗಡಿಯಲ್ಲಿ ಅನಗತ್ಯವಾಗಿ ಚೀನ ತನ್ನ ಸೈನಿಕರನ್ನು ಹೆಚ್ಚುವರಿ ಸಂಖ್ಯೆಯಲ್ಲಿ ಜಮಾಯಿಸಿದೆ.

ಇದಕ್ಕೆ ಪ್ರತಿಯಾಗಿ ಭಾರತವೂ ತನ್ನ ಸೇನೆಯನ್ನು ಜಮಾವಣೆ ಮಾಡುವಂತಾಗಿದೆ. ಈ ಸಮಸ್ಯೆಯನ್ನು ಇತ್ಯರ್ಥಗೊಳಿಸುವಲ್ಲಿ ಚೀನ ಯಾವ ಕ್ರಮ ಕೈಗೊಂಡಿದೆ ಎಂಬ ಪ್ರಶ್ನೆಯನ್ನು ಕೇಳಿದಾಗ, ವೆಯ್‌ ಮೇಲಿನಂತೆ ಉತ್ತರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Sanga ಮಾರ್ಚ್ 09 ಕರ್ನಾಟಕ ಸಂಘದಲ್ಲಿ ಸಾಹಿತಿ ರಂಜನಿ ರಾಘವನ್ ತಿಂಗಳ ಅತಿಥಿ

Karnataka Sanga ದಿನಾಂಕ 09ನೇ ಮಾರ್ಚ್ 2026ರ ಸೋಮವಾರ, ಸಂಜೆ 5:30ಕ್ಕೆ...

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ...

Klive Special Article ನಿಮ್ಮೂರು ನಮ್ಮ ಮಾಹಿತಿ ಸ್ಥಳ: ಸುಣ್ಣದಹಳ್ಳಿ ಲೇ: ದಿಲೀಪ್ ನಾಡಿಗ್

Klive Special Article ಸುವರ್ಣ ಹಳ್ಳಿ ಕಾಲಕ್ರಮೇಣ ಸುಣ್ಣದ ಹಳ್ಳಿಯಾಯಿತು. ಇಲ್ಲಿದ್ದಾನೆ...

Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...