Monday, August 24, 2026
Monday, August 24, 2026

ಗಡಿರೇಖೆಯಲ್ಲಿ ಉದ್ವಿಗ್ನತೆ: ಭಾರತದ ಮೇಲೆ ಗೂಬೆ ಕೂರಿಸಿದ ಚೀನಾ

Date:

ಭಾರತ ಮತ್ತು ಚೀನ ನಡುವಿನ ನೈಜ ಗಡಿ ರೇಖೆಯಲ್ಲಿ ಗಡಿಯಲ್ಲಿ ಆಗಾಗ ಉಂಟಾಗುತ್ತಿರುವ ಶಾಂತಿ ಭಂಗದ ಪ್ರಕರಣಗಳಿಗೆ, ಅಲ್ಲಿ ಎದ್ದಿರುವ ಉದ್ವಿಗ್ನತೆಗೆ ಭಾರತವೇ ಕಾರಣ ಎಂದು ಚೀನದ ವಿದೇಶಾಂಗ ಸಚಿವ ವೀ ಫೆಂಘೆ ಆರೋಪಿಸಿದ್ದಾರೆ.

ಸಿಂಗಾಪುರದಲ್ಲಿ ನಡೆದ ಶಾಂಗ್ರಿ ಲಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ಘರ್ಷಣೆಗೆ ಪ್ರಚೋದನೆ ನೀಡಿದ್ದೇ ಭಾರತ ಎಂಬುದು ನಮಗೆ ತಿಳಿದುಬಂದಿದೆ. ಗಡಿಯಲ್ಲಿ ಭಾರತ ಹೆಚ್ಚೆಚ್ಚು ಶಸ್ತ್ರಾಸ್ತ್ರಗಳನ್ನು ಜಮಾವಣೆ ಮಾಡಿದ್ದಲ್ಲದೆ, ಹೆಚ್ಚುವರಿ ಯೋಧರನ್ನು ಚೀನ ಗಡಿಯ ಕಡೆಗೆ ರವಾನಿಸಿದೆ. ಇಂಥ ಘಟನೆಗಳು ಘರ್ಷಣೆಗೆ ಪ್ರೇರಣೆ ನೀಡುತ್ತವೆ” ಎಂದಿದ್ದಾರೆ.
ಎಲ್‌ಎಸಿಯಲ್ಲಿ ಚೀನ ಸೈನಿಕರಿಂದ ಶಾಂತಿ ಭಂಗವಾಗುವ ನಿಟ್ಟಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಭಾರತವೇ ನೇರ ಹೊಣೆ.
ಆಗಾಗ ಅಲ್ಲಿ ಆಗಿರುವ ಗಲಭೆಗಳಿಗೆ ಭಾರತವೇ ಕಾರಣ ಎಂದರು.

ಸಂವಾದದಲ್ಲಿ ಹಾಜರಿದ್ದ ಅಮೆರಿಕದ ಚಿಂತಕರ ಚಾವಡಿಯ ಸದಸ್ಯರಾದ ಡಾ. ತನ್ವಿ ಮದನ್‌, “ಎಲ್‌ಎಸಿಯಲ್ಲಿ 2 ವರ್ಷಗಳ ಹಿಂದೆ ಚೀನ ಸೈನಿಕರು ಶಾಂತಿ ಉಲ್ಲಂಘಿಸಿದ್ದರು. ಈಗಲೂ ಗಡಿಯಲ್ಲಿ ಅನಗತ್ಯವಾಗಿ ಚೀನ ತನ್ನ ಸೈನಿಕರನ್ನು ಹೆಚ್ಚುವರಿ ಸಂಖ್ಯೆಯಲ್ಲಿ ಜಮಾಯಿಸಿದೆ.

ಇದಕ್ಕೆ ಪ್ರತಿಯಾಗಿ ಭಾರತವೂ ತನ್ನ ಸೇನೆಯನ್ನು ಜಮಾವಣೆ ಮಾಡುವಂತಾಗಿದೆ. ಈ ಸಮಸ್ಯೆಯನ್ನು ಇತ್ಯರ್ಥಗೊಳಿಸುವಲ್ಲಿ ಚೀನ ಯಾವ ಕ್ರಮ ಕೈಗೊಂಡಿದೆ ಎಂಬ ಪ್ರಶ್ನೆಯನ್ನು ಕೇಳಿದಾಗ, ವೆಯ್‌ ಮೇಲಿನಂತೆ ಉತ್ತರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ರಕ್ಷಾಬಂಧನವು ಸಹೋದರ- ಸಹೋದರರಿಯರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ: ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕ

ರಕ್ಷಾಬಂಧನವು ಕೇವಲ ಒಂದು ಹಬ್ಬವಲ್ಲ. ಅದು ಪ್ರೀತಿ, ವಿಶ್ವಾಸ, ಗೌರವ ಮತ್ತು...

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...