Wednesday, March 25, 2026
Wednesday, March 25, 2026

ಸೇರಿಗೆ ಸವ್ವಾಸೇರು… ಈ ಘಟನೆ!

Date:

ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ ವಿಚಿತ್ರ ಘಟನೆ ನಡೆದಿದೆ.

ಲೈನ್‌ಮ್ಯಾನ್‌ ಒಬ್ಬಾತನ ಬೈಕ್‌ಗೆ ದಾಖಲೆ ಪತ್ರಗಳಲ್ಲಿ ಎಂದು ಪೊಲೀಸ್‌ ಅಧಿಕಾರಿ ದಂಡ ವಿಧಿಸಿದರು. ಇದಕ್ಕೆ ಪ್ರತಿಯಾಗಿ ಇದೇ ಲೈನ್‌ಮ್ಯಾನ್‌, ಪೊಲೀಸ್‌ ಠಾಣೆಗೆ ಮೀಟರ್‌ ಸಂಪರ್ಕವಿಲ್ಲ ಎಂದು ಪವರ್‌ ಕಟ್‌ ಮಾಡಿ ಸುದ್ದಿಯಾಗಿದ್ದಾರೆ.

ಹರ್ದಾಸ್‌ಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಕುರಿತು ತನಿಖೆಗೆ ವಿದ್ಯುತ್‌ ಇಲಾಖೆ ಆದೇಶ ನೀಡಿದೆ.

ಹರ್ದಾಸ್‌ಪುರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಪೊಲೀಸ್‌ ಅಧಿಕಾರಿ ಮೋದಿ ಸಿಂಗ್‌ ವಾಹನ ತಪಾಸಣೆ ಮಾಡುತ್ತಿದ್ದರು. ಆಗ ಅದೇ ದಾರಿಯಲ್ಲಿ ಲೈನ್‌ಮ್ಯಾನ್‌ ಭಗವಾನ್‌ ಸ್ವರೂಪ್ ಬೈಕ್‌ ಚಲಾಯಿಸಿಕೊಂಡು ಬಂದಿದ್ದರು. ಅವರ ಬೈಕ್‌ ಅನ್ನು ತಡೆದ ಮೋದಿ ಸಿಂಗ್‌, ಅಗತ್ಯ ದಾಖಲೆಗಳನ್ನು ತೋರಿಸಲು ಹೇಳಿದ್ದರು. ಈಗ ಇಲ್ಲ, ಮನೆಗೆ ಹೋಗಿ ತಂದು ತೋರಿಸುವೆ ಎಂದು ಭಗವಾನ್‌ ಮನವಿ ಮಾಡಿದ್ದರು.

ಆದರೆ, ಭಗವಾನ್‌ ಅವರ ಮನವಿಯನ್ನು ತಿರಸ್ಕರಿಸಿದ ಮೋದಿ ಸಿಂಗ್‌, 500 ರೂಪಾಯಿ ದಂಡ ಪಾವತಿಸುವಂತೆ ಚಲನ್‌ ನೀಡಿದ್ದರು. ಇದರಿಂದ ನೊಂದ ಭಗವಾನ್‌, ತನ್ನ ಸಹೋದ್ಯೋಗಿಗಳಿಗೆ ಕರೆ ಮಾಡಿ ವಿವರ ನೀಡಿದ್ದ. ಅಲ್ಲದೆ, ಪೊಲೀಸ್‌ ಠಾಣೆಯ ಪವರ್‌ ಕಟ್‌ ಮಾಡುವಂತೆ ಕೇಳಿಕೊಂಡಿದ್ದ.

ಶನಿವಾರ ರಾತ್ರಿ ವಿದ್ಯುತ್‌ ಇಲಾಖೆ ಸಿಬ್ಬಂದಿ ಹರ್ದಾಸ್‌ಪುರ ಪೊಲೀಸ್‌ ಠಾಣೆಯ ಪವರ್‌ ಕಟ್‌ ಮಾಡಿದ್ದರು. ಏಕೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಕೇಳಿದಾಗ ಭಗವಾನ್‌ ಹೆಸರು ಪ್ರಸ್ತಾಪವಾಗಿದೆ. ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿರುವ ಆತ, ಪೊಲೀಸ್‌ ಠಾಣೆಯಲ್ಲಿ ವಿದ್ಯುತ್‌ ಮೀಟರ್‌ ಇರಲಿಲ್ಲ. ಹೀಗಾಗಿ ಅದು ಅಕ್ರಮ ವಿದ್ಯುತ್‌ ಸಂಪರ್ಕ ಎಂದು ಹೇಳಿದ್ದಾನೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...