Wednesday, October 2, 2024
Wednesday, October 2, 2024

ಸೇರಿಗೆ ಸವ್ವಾಸೇರು… ಈ ಘಟನೆ!

Date:

ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ ವಿಚಿತ್ರ ಘಟನೆ ನಡೆದಿದೆ.

ಲೈನ್‌ಮ್ಯಾನ್‌ ಒಬ್ಬಾತನ ಬೈಕ್‌ಗೆ ದಾಖಲೆ ಪತ್ರಗಳಲ್ಲಿ ಎಂದು ಪೊಲೀಸ್‌ ಅಧಿಕಾರಿ ದಂಡ ವಿಧಿಸಿದರು. ಇದಕ್ಕೆ ಪ್ರತಿಯಾಗಿ ಇದೇ ಲೈನ್‌ಮ್ಯಾನ್‌, ಪೊಲೀಸ್‌ ಠಾಣೆಗೆ ಮೀಟರ್‌ ಸಂಪರ್ಕವಿಲ್ಲ ಎಂದು ಪವರ್‌ ಕಟ್‌ ಮಾಡಿ ಸುದ್ದಿಯಾಗಿದ್ದಾರೆ.

ಹರ್ದಾಸ್‌ಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಕುರಿತು ತನಿಖೆಗೆ ವಿದ್ಯುತ್‌ ಇಲಾಖೆ ಆದೇಶ ನೀಡಿದೆ.

ಹರ್ದಾಸ್‌ಪುರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಪೊಲೀಸ್‌ ಅಧಿಕಾರಿ ಮೋದಿ ಸಿಂಗ್‌ ವಾಹನ ತಪಾಸಣೆ ಮಾಡುತ್ತಿದ್ದರು. ಆಗ ಅದೇ ದಾರಿಯಲ್ಲಿ ಲೈನ್‌ಮ್ಯಾನ್‌ ಭಗವಾನ್‌ ಸ್ವರೂಪ್ ಬೈಕ್‌ ಚಲಾಯಿಸಿಕೊಂಡು ಬಂದಿದ್ದರು. ಅವರ ಬೈಕ್‌ ಅನ್ನು ತಡೆದ ಮೋದಿ ಸಿಂಗ್‌, ಅಗತ್ಯ ದಾಖಲೆಗಳನ್ನು ತೋರಿಸಲು ಹೇಳಿದ್ದರು. ಈಗ ಇಲ್ಲ, ಮನೆಗೆ ಹೋಗಿ ತಂದು ತೋರಿಸುವೆ ಎಂದು ಭಗವಾನ್‌ ಮನವಿ ಮಾಡಿದ್ದರು.

ಆದರೆ, ಭಗವಾನ್‌ ಅವರ ಮನವಿಯನ್ನು ತಿರಸ್ಕರಿಸಿದ ಮೋದಿ ಸಿಂಗ್‌, 500 ರೂಪಾಯಿ ದಂಡ ಪಾವತಿಸುವಂತೆ ಚಲನ್‌ ನೀಡಿದ್ದರು. ಇದರಿಂದ ನೊಂದ ಭಗವಾನ್‌, ತನ್ನ ಸಹೋದ್ಯೋಗಿಗಳಿಗೆ ಕರೆ ಮಾಡಿ ವಿವರ ನೀಡಿದ್ದ. ಅಲ್ಲದೆ, ಪೊಲೀಸ್‌ ಠಾಣೆಯ ಪವರ್‌ ಕಟ್‌ ಮಾಡುವಂತೆ ಕೇಳಿಕೊಂಡಿದ್ದ.

ಶನಿವಾರ ರಾತ್ರಿ ವಿದ್ಯುತ್‌ ಇಲಾಖೆ ಸಿಬ್ಬಂದಿ ಹರ್ದಾಸ್‌ಪುರ ಪೊಲೀಸ್‌ ಠಾಣೆಯ ಪವರ್‌ ಕಟ್‌ ಮಾಡಿದ್ದರು. ಏಕೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಕೇಳಿದಾಗ ಭಗವಾನ್‌ ಹೆಸರು ಪ್ರಸ್ತಾಪವಾಗಿದೆ. ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿರುವ ಆತ, ಪೊಲೀಸ್‌ ಠಾಣೆಯಲ್ಲಿ ವಿದ್ಯುತ್‌ ಮೀಟರ್‌ ಇರಲಿಲ್ಲ. ಹೀಗಾಗಿ ಅದು ಅಕ್ರಮ ವಿದ್ಯುತ್‌ ಸಂಪರ್ಕ ಎಂದು ಹೇಳಿದ್ದಾನೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...