Wednesday, March 25, 2026
Wednesday, March 25, 2026

ನವೀನ್ ಜಿಂದಾಲ್ ಹೆಸರಿನ ಪ್ರಸ್ತಾಪದ ಬಗ್ಗೆ ಜಿಂದಾಲ್ ಕಂಪೆನಿ ಸ್ಪಷ್ಟೀಕರಣ

Date:

ಪ್ರವಾದಿ ಮಹಮ್ಮದರ ಅವಹೇಳನಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ನವೀನ್‌ ಕುಮಾರ್‌ ಜಿಂದಾಲ್‌ ಅವರಿಗೂ ಜಿಂದಾಲ್‌ ಸಂಸ್ಥೆಯ ಅಧ್ಯಕ್ಷ ನವೀನ್‌ ಜಿಂದಾಲ್‌ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಜಿಂದಾಲ್‌ ಸಮೂಹ ಸಂಸ್ಥೆ ಸ್ಪಷ್ಟಪಡಿಸಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಜಿಂದಾಲ್‌ ಸಂಸ್ಥೆ, ‘ನವೀನ್ ಕುಮಾರ್ ಜಿಂದಾಲ್ ಹೆಸರಿನ ವ್ಯಕ್ತಿಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳಿಗೂ, ನಮ್ಮ ಸಂಸ್ಥೆಯ ಅಧ್ಯಕ್ಷರಾದ ನವೀನ್ ಜಿಂದಾಲ್‌ಗೂ ಯಾವುದೇ ರೀತಿಯಲ್ಲೂ ಸಂಬಂಧಿಸಿಲ್ಲ. ವರದಿ ಮಾಡುವಾಗ ನಮ್ಮ ಅಧ್ಯಕ್ಷರ ಚಿತ್ರಗಳನ್ನು ತಪ್ಪಾಗಿ ಬಳಸದಂತೆ ನಾವು ಮಾಧ್ಯಮಗಳಿಗೆ ಮನವಿ ಮಾಡುತ್ತೇವೆ. ಹಾಗೆ ಬಳಸಿದರೆ ಅದು ಗುರುತು ಪತ್ತೆಯಲ್ಲಿನ ಪ್ರಮಾದವಾಗಲಿದೆ ಎಂದು ತಿಳಿಸಿದೆ.

ಪ್ರವಾದಿ ಅವಹೇಳನ ಖಂಡಿಸಿ ಅರಬ್ ರಾಷ್ಟ್ರಗಳಿಂದ ಮತ್ತು ಟ್ವಿಟರ್‌ನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಬಿಜೆಪಿ ಈ ಕ್ರಮ ಕೈಗೊಂಡಿತ್ತು.

ಪ್ರವಾದಿ ಮಹಮ್ಮದ್ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ದೆಹಲಿ ಬಿಜೆಪಿಯ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥ ನವೀನ್‌ ಕುಮಾರ್‌ ಜಿಂದಾಲ್‌ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...