Monday, August 24, 2026
Monday, August 24, 2026

ನವೀನ್ ಜಿಂದಾಲ್ ಹೆಸರಿನ ಪ್ರಸ್ತಾಪದ ಬಗ್ಗೆ ಜಿಂದಾಲ್ ಕಂಪೆನಿ ಸ್ಪಷ್ಟೀಕರಣ

Date:

ಪ್ರವಾದಿ ಮಹಮ್ಮದರ ಅವಹೇಳನಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ನವೀನ್‌ ಕುಮಾರ್‌ ಜಿಂದಾಲ್‌ ಅವರಿಗೂ ಜಿಂದಾಲ್‌ ಸಂಸ್ಥೆಯ ಅಧ್ಯಕ್ಷ ನವೀನ್‌ ಜಿಂದಾಲ್‌ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಜಿಂದಾಲ್‌ ಸಮೂಹ ಸಂಸ್ಥೆ ಸ್ಪಷ್ಟಪಡಿಸಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಜಿಂದಾಲ್‌ ಸಂಸ್ಥೆ, ‘ನವೀನ್ ಕುಮಾರ್ ಜಿಂದಾಲ್ ಹೆಸರಿನ ವ್ಯಕ್ತಿಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳಿಗೂ, ನಮ್ಮ ಸಂಸ್ಥೆಯ ಅಧ್ಯಕ್ಷರಾದ ನವೀನ್ ಜಿಂದಾಲ್‌ಗೂ ಯಾವುದೇ ರೀತಿಯಲ್ಲೂ ಸಂಬಂಧಿಸಿಲ್ಲ. ವರದಿ ಮಾಡುವಾಗ ನಮ್ಮ ಅಧ್ಯಕ್ಷರ ಚಿತ್ರಗಳನ್ನು ತಪ್ಪಾಗಿ ಬಳಸದಂತೆ ನಾವು ಮಾಧ್ಯಮಗಳಿಗೆ ಮನವಿ ಮಾಡುತ್ತೇವೆ. ಹಾಗೆ ಬಳಸಿದರೆ ಅದು ಗುರುತು ಪತ್ತೆಯಲ್ಲಿನ ಪ್ರಮಾದವಾಗಲಿದೆ ಎಂದು ತಿಳಿಸಿದೆ.

ಪ್ರವಾದಿ ಅವಹೇಳನ ಖಂಡಿಸಿ ಅರಬ್ ರಾಷ್ಟ್ರಗಳಿಂದ ಮತ್ತು ಟ್ವಿಟರ್‌ನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಬಿಜೆಪಿ ಈ ಕ್ರಮ ಕೈಗೊಂಡಿತ್ತು.

ಪ್ರವಾದಿ ಮಹಮ್ಮದ್ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ದೆಹಲಿ ಬಿಜೆಪಿಯ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥ ನವೀನ್‌ ಕುಮಾರ್‌ ಜಿಂದಾಲ್‌ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...