Sunday, May 24, 2026
Sunday, May 24, 2026

ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಷ್ಯಾದಲ್ಲಿ ಪ್ರವೇಶ ನೀಡಿಕೆ

Date:

ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದ ಅರ್ಧದಲ್ಲೇ ಓದು ಬಿಟ್ಟು ಸ್ಥಳಾಂತರವಾದ ಭಾರತೀಯ ವಿದ್ಯಾರ್ಥಿಗಳಿಗೆ ರಷ್ಯಾದಲ್ಲಿ ಅಡ್ಮಿಷನ್​ ನೀಡಲು ನಿರ್ಧರಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಿಂದ ವಂಚಿತರಾಗದಂತೆ ನೋಡಿಕೊಳ್ಳುವ ದೃಷ್ಟಿಯಿಂದ ರಷ್ಯಾದ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ನೀಡಲಾಗುವುದು ಎಂದು ನವದೆಹಲಿಯಲ್ಲಿರುವ ರಷ್ಯಾದ ರಾಯಭಾರಿ ಕಚೇರಿಯ ಉಪ ಮುಖ್ಯಸ್ಥ ರೋಮನ್ ಬಾಬುಶ್ಕಿನ್ ತಿಳಿಸಿದರು.

ರಷ್ಯಾದ ಒಕ್ಕೂಟದ ಗೌರವ ರಾಯಭಾರಿ ಮತ್ತು ತಿರುವನಂತಪುರಂನಲ್ಲಿರುವ ರಷ್ಯನ್ ಹೌಸ್‌ನ ನಿರ್ದೇಶಕ ರತೀಶ್ ಸಿ.ನಾಯರ್ ಮಾತನಾಡಿ, ಉಕ್ರೇನ್​​ನಲ್ಲಿ ಭಾರತೀಯ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಹೊಂದಿದ್ದರೆ, ಅದನ್ನು ರಷ್ಯಾದ ವಿಶ್ವವಿದ್ಯಾಲಯಗಳಲ್ಲಿ ಪಡೆಯಲು ಸಾಧ್ಯತೆಯಿದೆ ಎಂದು ತಿಳಿಸಿದರು.

ಫೆಬ್ರುವರಿಯಿಂದಲೂ ಉಕ್ರೇನ್ ಮತ್ತು ರಷ್ಯಾ ಯುದ್ಧ ನಡೆಯುತ್ತಿದೆ. ಇದರಿಂದ ಉಕ್ರೇನ್​ನಲ್ಲಿ ಶಿಕ್ಷಣ ಪಡೆಯುತ್ತಿದ್ದ ಭಾರತದ 20 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅರ್ಧದಲ್ಲೇ ಶಿಕ್ಷಣ ಮೊಟಕುಗೊಳಿಸಿ ತವರಿಗೆ ಮರಳಿದ್ದಾರೆ. ಈ ವಿದ್ಯಾರ್ಥಿಗಳ ಭವಿಷ್ಯದ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ಭಾರತೀಯ ವಿದ್ಯಾರ್ಥಿಗಳಿಗೆ ರಷ್ಯಾದ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ನೀಡಲಾಗುವುದು. ರಷ್ಯಾದಲ್ಲಿ ವಿದ್ಯಾರ್ಥಿಗಳು ಈ ಹಿಂದಿನ ವರ್ಷ ಬಿಟ್ಟುಹೋದ ಕೋರ್ಸ್‌ಗಳನ್ನು ಮುಂದುವರಿಸಬಹುದು ಎಂದು ಹೇಳಿದರು.

ಉಕ್ರೇನ್‌ನಲ್ಲಿ ಪಾವತಿಸುವ ಶುಲ್ಕಕ್ಕಿಂತ ರಷ್ಯಾದಲ್ಲಿ ಅಧಿಕವಾಗಿರುತ್ತದೆ ಎಂಬ ಸುಳಿವು ಕೂಡ ನೀಡಿದರು.
ಕೇರಳದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಳು ಮತ್ತು ಇತರ ಶೈಕ್ಷಣಿಕ ದಾಖಲೆಗಳೊಂದಿಗೆ ತಿರುವನಂತಪುರಂನಲ್ಲಿರುವ ರಷ್ಯನ್ ಹೌಸ್​ಗೆ ಭೇಟಿ ಕೊಡಬಹುದು. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಇಚ್ಛಿಸುವ ರಷ್ಯಾದ ವಿಶ್ವವಿದ್ಯಾಲಯಗಳಿಗೆ ದಾಖಲಾತಿಗಳನ್ನು ರವಾನಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.ಭಾರತೀಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಅವರ ಸಾವಿಗೆ ರಷ್ಯ ಕಾರಣವಾದ ಸುದ್ದಿಯನ್ನ ಇಲ್ಲಿ ಸ್ಮರಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...