Monday, February 2, 2026
Monday, February 2, 2026

ನೂಪುರ್ ಶರ್ಮಾ ಅವರನ್ನ ಕ್ಷಮಿಸಿ-ಸುಹೈಬ್ ಖ್ವಾಸ್ಮಿ

Date:

ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತು ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಅವರನ್ನು ಇಸ್ಲಾಂ ಧರ್ಮದ ಪ್ರಕಾರ ಕ್ಷಮಿಸಬೇಕು ಎಂದು ಜಮಾತ್ ಉಲೇಮಾ ಎ ಹಿಂದ್ ನ ಅಧ್ಯಕ್ಷ ಸುಹೈಬ್ ಖ್ವಾಸ್ಮಿ ತಿಳಿಸಿರುವುದಾಗಿ ವರದಿಯಿಂದ ತಿಳಿದು ಬಂದಿದೆ.

ನೂಪುರ್ ಶರ್ಮಾ ಹೇಳಿಕೆಯನ್ನು ವಿರೋಧಿಸಿ ರಾಷ್ಟ್ರವ್ಯಾಪಿ ಮುಷ್ಕರ ನಡೆಸುವುದನ್ನು ಮುಸ್ಲಿಂ ವಿದ್ವಾಂಸರ ಸಂಘಟನೆ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದರು. ಶುಕ್ರವಾರದ ಪ್ರಾರ್ಥನೆಯ ಬಳಿಕ ನೂಪುರ್ ಹೇಳಿಕೆ ವಿರುದ್ಧ ದೇಶವ್ಯಾಪಿ ಪ್ರತಿಭಟನೆ ನಡೆದ ನಂತರ ಜಮಾತ್ ಉಲೇಮಾ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ವಿಷಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ಇಸ್ಲಾಂ ಧರ್ಮ ಹೇಳುವ ಪ್ರಕಾರ ನೂಪುರ್ ಶರ್ಮಾಳನ್ನು ಕ್ಷಮಿಸಬೇಕಾಗಿದೆ. ಅಷ್ಟೇ ಅಲ್ಲ ನೂಪುರ್ ಹೇಳಿಕೆ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆ ನಡೆಸುವುದನ್ನು ನಾವು ಒಪ್ಪಿಕೊಳ್ಳುವುದಿಲ್ಲ ಎಂದು ಜಮಾತ್ ಉಲೇಮಾದ ಖ್ವಾಸ್ಮಿ ತಿಳಿಸಿದ್ದಾರೆ.

ಮತ್ತೊಂದು ಕಡೆ, ನೂಪುರ್ ಶರ್ಮಾ ಅವರನ್ನು ವಜಾಗೊಳಿಸಿರುವ ಭಾರತೀಯ ಜನತಾ ಪಕ್ಷದ ನಿರ್ಧಾರವನ್ನು ಸ್ವಾಗತಿಸುವುದಾಗಿ ಜಮಾತ್ ಉಲೇಮಾ ಎ ಹಿಂದ್ ಈ ಸಂದರ್ಭದಲ್ಲಿ ತಿಳಿಸಿದೆ. ಭಾರತ ಕಾನೂನಿನ ತವರಾಗಿದೆ. ಈ ನಿಟ್ಟಿನಲ್ಲಿ ನಾವು ಕಾನೂನನ್ನು ಕೈಗತ್ತಿಕೊಳ್ಳಬಾರದು. ನಾವು ಬೀದಿಗಿಳಿದು, ನಿಯಮವನ್ನು ಉಲ್ಲಂಘಿಸಲು ಕಾನೂನು ಅವಕಾಶ ನೀಡುವುದಿಲ್ಲ ಎಂದು ಖ್ವಾಸ್ಮಿ ಅವರು ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...