Wednesday, May 6, 2026
Wednesday, May 6, 2026

ನೂಪುರ್ ಶರ್ಮಾ ಅವರನ್ನ ಕ್ಷಮಿಸಿ-ಸುಹೈಬ್ ಖ್ವಾಸ್ಮಿ

Date:

ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತು ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಅವರನ್ನು ಇಸ್ಲಾಂ ಧರ್ಮದ ಪ್ರಕಾರ ಕ್ಷಮಿಸಬೇಕು ಎಂದು ಜಮಾತ್ ಉಲೇಮಾ ಎ ಹಿಂದ್ ನ ಅಧ್ಯಕ್ಷ ಸುಹೈಬ್ ಖ್ವಾಸ್ಮಿ ತಿಳಿಸಿರುವುದಾಗಿ ವರದಿಯಿಂದ ತಿಳಿದು ಬಂದಿದೆ.

ನೂಪುರ್ ಶರ್ಮಾ ಹೇಳಿಕೆಯನ್ನು ವಿರೋಧಿಸಿ ರಾಷ್ಟ್ರವ್ಯಾಪಿ ಮುಷ್ಕರ ನಡೆಸುವುದನ್ನು ಮುಸ್ಲಿಂ ವಿದ್ವಾಂಸರ ಸಂಘಟನೆ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದರು. ಶುಕ್ರವಾರದ ಪ್ರಾರ್ಥನೆಯ ಬಳಿಕ ನೂಪುರ್ ಹೇಳಿಕೆ ವಿರುದ್ಧ ದೇಶವ್ಯಾಪಿ ಪ್ರತಿಭಟನೆ ನಡೆದ ನಂತರ ಜಮಾತ್ ಉಲೇಮಾ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ವಿಷಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ಇಸ್ಲಾಂ ಧರ್ಮ ಹೇಳುವ ಪ್ರಕಾರ ನೂಪುರ್ ಶರ್ಮಾಳನ್ನು ಕ್ಷಮಿಸಬೇಕಾಗಿದೆ. ಅಷ್ಟೇ ಅಲ್ಲ ನೂಪುರ್ ಹೇಳಿಕೆ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆ ನಡೆಸುವುದನ್ನು ನಾವು ಒಪ್ಪಿಕೊಳ್ಳುವುದಿಲ್ಲ ಎಂದು ಜಮಾತ್ ಉಲೇಮಾದ ಖ್ವಾಸ್ಮಿ ತಿಳಿಸಿದ್ದಾರೆ.

ಮತ್ತೊಂದು ಕಡೆ, ನೂಪುರ್ ಶರ್ಮಾ ಅವರನ್ನು ವಜಾಗೊಳಿಸಿರುವ ಭಾರತೀಯ ಜನತಾ ಪಕ್ಷದ ನಿರ್ಧಾರವನ್ನು ಸ್ವಾಗತಿಸುವುದಾಗಿ ಜಮಾತ್ ಉಲೇಮಾ ಎ ಹಿಂದ್ ಈ ಸಂದರ್ಭದಲ್ಲಿ ತಿಳಿಸಿದೆ. ಭಾರತ ಕಾನೂನಿನ ತವರಾಗಿದೆ. ಈ ನಿಟ್ಟಿನಲ್ಲಿ ನಾವು ಕಾನೂನನ್ನು ಕೈಗತ್ತಿಕೊಳ್ಳಬಾರದು. ನಾವು ಬೀದಿಗಿಳಿದು, ನಿಯಮವನ್ನು ಉಲ್ಲಂಘಿಸಲು ಕಾನೂನು ಅವಕಾಶ ನೀಡುವುದಿಲ್ಲ ಎಂದು ಖ್ವಾಸ್ಮಿ ಅವರು ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...