ನೂತನ ಉಪ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್. ಪಾಟೀಲ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬೆಂಗಳೂರು ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸಮಾರಂಭ ನಡೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಈ ಸಂದರ್ಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ವಿ. ಸೋಮಣ್ಣ, ಹಾಲಪ್ಪ ಆಚಾರ್ ಮತ್ತು ಶಾಸಕರು ಉಪಸ್ಥಿತರಿದ್ದರು.