Wednesday, May 27, 2026
Wednesday, May 27, 2026

ಕ್ರೀಡಾರಂಗದಲ್ಲಿ ಹಿಂದು ಮುಸ್ಲಿಂ ಮುಖ್ಯವಲ್ಲ ದೇಶ ಮುಖ್ಯ- ಜರೀನ್

Date:

ಕ್ರೀಡಾಪಟುವಾಗಿ ನಾನು ಭಾರತವನ್ನು ಪ್ರತಿನಿಧಿಸುತ್ತೇನೆ. ನನಗೆ ಹಿಂದೂ-ಮುಸ್ಲಿಂ ಮುಖ್ಯವಲ್ಲ. ನಾನು ಸಮುದಾಯವನ್ನು ಪ್ರತಿನಿಧಿಸುತ್ತಿಲ್ಲ ಬದಲಿಗೆ ನನ್ನ ದೇಶವನ್ನು ಪ್ರತಿನಿಧಿಸುತ್ತಿದ್ದೇನೆ ಎಂದು ವಿಶ್ವ ಚಾಂಪಿಯನ್ ಅವರು ತಿಳಿಸಿದ್ದಾರೆ.

ಇವರ ಸಾಧನೆಗಳಿಗಿಂತ ಇವರ ಧಾರ್ಮಿಕ ಹಿನ್ನೆಲೆಯ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಬಾಕ್ಸರ್ ನಿಖತ್ ಜರೀನ್ ಅವರು ಪ್ರತ್ಯುತ್ತರ ನೀಡಿದ್ದಾರೆ.

ಕ್ರೀಡಾಕೂಟಗಳಲ್ಲಿ ಮಾನಸಿಕ ಒತ್ತಡವನ್ನು ನಿಭಾಯಿಸಲು ಬೆಂಬಲದ ಅಗತ್ಯ. ನಮ್ಮ ಭಾರತೀಯ ಬಾಕ್ಸರ್‌ಗಳು ತುಂಬಾ ಪ್ರತಿಭಾವಂತರು, ನಾವು ಯಾರಿಗೂ ಕಡಿಮೆ ಇಲ್ಲ. ನಮ್ಮಲ್ಲಿ ಶಕ್ತಿ, ವೇಗ ಮತ್ತು ಶಕ್ತಿ..ಎಲ್ಲವೂ ಇದೆ ಎಂದಿದ್ದಾರೆ.

ಜರೀನ್ ಅವರು ಕಳೆದ ತಿಂಗಳು ಟರ್ಕಿಯಲ್ಲಿ ನಡೆದ ಚಾಂಪಿಯನ್‌ಶಿಪ್‌ನ ಫ್ಲೈವೇಟ್ ವಿಭಾಗದಲ್ಲಿ ಥಾಯ್ಲೆಂಡ್‌ನ ಜಿಟ್‌ಪಾಂಗ್ ಜುತಾಮಾಸ್ ಅವರನ್ನು 5-0 ಅಂತರದಿಂದ ಸೋಲಿಸಿ ವಿಶ್ವ ಚಾಂಪಿಯನ್ ಕಿರೀಟವನ್ನು ಅಲಂಕರಿಸಿದ ಐದನೇ ಭಾರತೀಯ ಮಹಿಳೆಯಾಗಿದ್ದಾರೆ.

ಕಳೆದ ತಿಂಗಳು ಫ್ಲೈವೇಟ್ ಸ್ಪರ್ಧೆಯಲ್ಲಿ ವಿಶ್ವ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡ ಜರೀನ್, ಜುಲೈ 28 ರಿಂದ ಪ್ರಾರಂಭವಾಗುವ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್‌ಗೆ ಸಹ ಸ್ಥಾನ ಪಡೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

International Day for Biological Diversity ಪ್ಲಾಸ್ಟಿಕ್ ಹಾವಳಿ: ನಿತ್ಯ ಸಾವಿರಾರು ಜೀವಿಗಳುನಾಶ- ಡಾ.ನಾಗರಾಜ್ ಪರಿಸರ.

International Day for Biological Diversity ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆಯನ್ನು ಶಿವಮೊಗ್ಗದ...

Youth Hostel Association ಹಿಮಾಲಯ ಚಾರಣ: ಶಿವಮೊಗ್ಗದ ವಿಜೇಂದ್ರ ರಾವ್ & ಎಮ್.ಕೆ .ಜ್ಯೋತಿ ಅವರಿಗೆ ತಂಡಗಳ ನಾಯಕತ್ವ.

Youth Hostel Association ಶಿವಮೊಗ್ಗ ನಗರದ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ...

Diploma Admission ಸಹಕಾರ ಡಿಪ್ಲೊಮಾ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ.

Diploma Admission ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್‌ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಶಿವಮೊಗ್ಗ ಇವರ ವತಿಯಿಂದ...

High Court ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ. ಮೆಡಿಕಲ್ ಐಕಾನ್ಸ್ ಸೇವಾತಂಡದ ಆಗ್ರಹ.

High Court ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡ ಬೇಕು ಎಂದು...