Friday, April 18, 2025
Friday, April 18, 2025

ಪಠ್ಯ ವಿಸರ್ಜನೆಯಾಗಿದೆ,ಪಠ್ಯ ಪುಸ್ತಕ ವಿಸರ್ಜಿಸಿಲ್ಲ- ಸಿದ್ಧರಾಮಯ್ಯ

Date:

ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ. ಆದರೆ, ಪಠ್ಯ ಪುಸ್ತಕವನ್ನು ವಿಸರ್ಜನೆ ಮಾಡಿಲ್ಲ. ಈ ಸರ್ಕಾರ ನಮ್ಮ ಮಕ್ಕಳಿಗೆ ವಿಷ ಉಣಿಸುವ ಕೆಲಸ ಮಾಡುತ್ತಿದೆ. ಇದನ್ನು ನಾವು ತಡೆಗಟ್ಟದೇ ಹೋದರೆ ಇಡಿ ಬದುಕನ್ನು ಹಾಳು ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಣೆ ಮಾಡಿರುವ ಪಠ್ಯವನ್ನ ವಜಾಗೊಳಿಸಬೇಕು ಎಂದು ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ ನಿನ್ನೆ ಬುಧವಾರ ಪಾದಯಾತ್ರೆ ನಡೆಯಿತು. ಪಾದಯಾತ್ರೆಯ ಸಮಾರೋಪ ಸಮಾರಂಭವನ್ನು ತೀರ್ಥಹಳ್ಳಿಯ ಸಂಸ್ಕೃತಿ ಮಂದಿರದ ಎದುರು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಸಾಂಸ್ಕೃತಿಕ ಭಯೋತ್ಪಾದನೆ ನಡೆಯುತ್ತಿದೆ. ಇದರ ವಿರುದ್ಧ ಕನ್ನಡದ ಮನಸುಗಳು ಹೋರಾಟ ಮಾಡಬೇಕಿದೆ. ರಾಜಕೀಯೇತರವಾಗಿ ಈ ಹೋರಾಟ ನಡೆಯಬೇಕಿದೆ. ದೇಶದಲ್ಲಿ ಅನೇಕ ಭಾರೀ ಚರಿತ್ರೆಯನ್ನು ತಿದ್ದಿದ್ದಾರೆ. ಈಗ ಪುನಃ ಚರಿತ್ರೆಯನ್ನು ತಿದ್ದಲು ಮುಂದಾಗಿದ್ದಾರೆ ಎಂದು ಸಿದ್ದರಾಮಯ್ಯ ಅವರು ದೂರಿದ್ದಾರೆ.

ಭಾರತದ ಸಂವಿಧಾನ ಸಮಾನತೆಯನ್ನು ಹೇಳುತ್ತದೆ. ಜಾತ್ಯತೀತ ತತ್ವ ಬೋಧಿಸುತ್ತದೆ. ಇದು ಮನವಾದಿಗಳಿಗೆ ಇಷ್ಟವಾಗುವುದಿಲ್ಲ. ಆರ್‌ಎಸ್‌ಎಸ್ ಹಾಗೂ ಅಂಗ ಸಂಸ್ಥೆಗಳಿಗೆ ಸಂವಿಧಾನದ ಬಗ್ಗೆ ಒಪ್ಪಿಗೆ ಇಲ್ಲ. ಸಾವಿರಾರು ವರ್ಷದಿಂದ ಮೇಲ್ವರ್ಗದ ಜನರು ಕೆಳವರ್ಗದವರ ಮೇಲೆ ದಬ್ಬಾಳಿಕೆ, ದೌರ್ಜನ್ಯ ಮಾಡಿಕೊಂಡು ಬಂದಿದ್ದಾರೆ. ಇದು ಮುಂದುವರೆಯಬೇಕು ಎಂಬುದು ಮನುವಾದಿಗಳ ಬಯಕೆಯಾಗಿದೆ ಎಂದು ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜ್ಞಾನವಿಲ್ಲದ ಸಚಿವ. ಪೊಲೀಸ್ ಇಲಾಖೆಯಲ್ಲಿನ ದುಸ್ಥಿತಿ ಗಮನಿಸಿದರೆ ಸಚಿವರಿಗೆ ಜ್ಞಾನವಿಲ್ಲ ಅನ್ನುವುದು ಗೊತ್ತಾಗುತ್ತದೆ. ಇನ್ನು ಶಿಕ್ಷಣ ಸಚಿವ ನಾಗೇಶ್ ಅವರು ಆರ್‌ಎಸ್‌ಎಸ್ ಸೇರಿಕೊಂಡು ಅವರು ಬರೀ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರು ತೀರ್ಥಹಳ್ಳಿಯವರು. ಅವರಿಗೆ ಅವಮಾನ ಆದಾಗ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ಕೊಟ್ಟು ಬರಬೇಕಿತ್ತು. ಆದರೆ, ಅವರು ಹಾಗೆ ಮಾಡಲಿಲ್ಲ. ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ಅವರನ್ನು ಸೋಲಿಸಿ ಎಂತಹವನ್ನು ಆಯ್ಕೆ ಮಾಡಿದ್ದೀರಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ. ಕೆ. ಹರಿಪ್ರಸಾದ ಅವರು ಪ್ರಶ್ನಿಸಿದ್ದಾರೆ.

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ ಬುಧವಾರ ಪಾದಯಾತ್ರೆ ನಡೆಸಲಾಯಿತು. ಸಾಹಿತಿಗಳು, ಪ್ರಗತಿಪರರು, ವಿವಿಧ ಸಂಘಟನೆಗಳ ಪ್ರಮುಖರು, ಸಾರ್ವಜನಿಕರು ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ಮಾಜಿ ಸಚಿವ ಕಿಮ್ಮನೆ ರತ್ನಾಕರ್, ವಿಶ್ವಮಾನವ ವೇದಿಕೆಯ ಸಂಚಾಲಕ ಕಡಿದಾಳು ದಯಾನಂದ್, ಡಾ. ನಾ. ಡಿಸೋಜಾ, ಮಾಜಿ ಶಾಸಕ ವೈ. ಎಸ್. ವಿ. ದತ್ತಾ, ರೈತ ಮುಖಂಡರಾದ ಕೆ. ಟಿ. ಗಂಗಾಧರ್ ಹಾಗೂ ಬಸವರಾಜಪ್ಪ, ಶಿಕ್ಷಣ ತಜ್ಞ ನಿರಂಜನ ಆರಾಧ್ಯ, ಎಚ್. ಎಸ್. ಸುಂದರೇಶ್ ಮುಂತಾದವರು ವೇದಿಕೆಯಲ್ಲಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...