Monday, December 15, 2025
Monday, December 15, 2025

ಪದವೀಧರರು ದೇಶದ ಹಿತಕ್ಕಾಗಿ ಕೆಲಸಮಾಡಬೇಕು-ತ್ಯಾವರಚಂದ್ ಗೆಹ್ಲೂಟ್

Date:

ಹೊಸ ಶಿಕ್ಷಣ ನೀತಿಯಲ್ಲಿ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಭಾರತ ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಇದು ಪೂರಕವಾಗಿದೆ ಎಂದು ರಾಜ್ಯಪಾಲ ತ್ಯಾವರಚಂದ್ ಗೆಹ್ಲೂಟ್ ಅವರು ಹೇಳಿದ್ದಾರೆ.

ಕುವೆಂಪು ವಿವಿ ಜ್ಞಾನ ಸಹ್ಯಾದ್ರಿಯಲ್ಲಿ ಆಯೋಜಿಸಿದ್ದ 31 ಮತ್ತು 32 ನೇ ಘಟಿಕೋತ್ಸವದಲ್ಲಿ ಅಭ್ಯರ್ಥಿಗಳಿಗೆ ವಿವಿಧ ಪದವಿ ಪ್ರಧಾನ ಮಾಡಿ ಮಾತನಾಡಿದರು.

ಪ್ರಸ್ತುತ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಭಾರತದ ಸಾಧನೆ ತೃಪ್ತಿಕರವಾಗಿಲ್ಲ. ಈ ಬಾರಿ ಒಲಂಪಿಕ್ ಕ್ರೀಡಾಕೂಟದಲ್ಲಿ ಹೆಚ್ಚಿನ ಪದಕಗಳು ಬಂದಿಲ್ಲ. ಆದರೆ, ದಿವ್ಯಾಂಗರ ಒಲಂಪಿಕ್ ನಲ್ಲಿ ಹೆಚ್ಚಿನ ಪದಕಗಳು ಬಂದಿರುವುದು ಶ್ಲಾಘನೀಯ ಎಂದು ತಿಳಿಸಿದ್ದಾರೆ.

ಪದವಿ ಪಡೆದ ವಿದ್ಯಾರ್ಥಿಗಳುಗಳು ದೇಶದ ಹಿತಕ್ಕಾಗಿ ಕೆಲಸ ಮಾಡಬೇಕು. ರಾಷ್ಟ್ರ ಕವಿ ಕುವೆಂಪು ಹೆಸರೇ ವಿವಿ ಗೆ ಪ್ರೇರಣಾದಾಯಕವಾಗಿದೆ. ವಿವಿ ಕೂಡ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವುದರಿಂದ ಇಲ್ಲಿ ಕಲಿಯುವುದೇ ಒಂದು ಹೆಮ್ಮೆ ಎಂದು ಹೇಳಿದ್ದಾರೆ.

ಡಿಗ್ರಿ ಆದ ನಂತರ ಕೇವಲ ಕೆಲಸಕ್ಕಾಗಿ ಹುಡುಕಾಟ ನಡೆಸದೆ ಅಧ್ಯಯನ ನಡೆಸುವ ಮೂಲಕ ದೇಶಕ್ಕೆ ಕೊಡುಗೆ ನೀಡುವಂತಾಗಬೇಕು.ಗುಣಮಟ್ಟದ ನೈತಿಕ ಶಿಕ್ಷಣದಿಂದ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ. ದೇಶದ ಉಜ್ವಲ ಭವಿಷ್ಯಕ್ಕೆ ಸರ್ಕಾರ ಜಾರಿಗೆ ತರುವ ಯೋಜನೆಗಳಲ್ಲಿ ನಿಮ್ಮ ಸಹಭಾಗಿತ್ವ ಇರಬೇಕು ಎಂದು ತಿಳಿಸಿದ್ದಾರೆ.

ಗೌರವ ಡಾಕ್ಟರೇಟ್ ಪದವಿ ಪಡೆದವರು ಅವರವರ ಕ್ಷೇತ್ರದಲ್ಲಿ ಅತ್ಯುತಮ ಸಾಧನೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಾಧನೆ ಮಾದುವಂತಾಗಲಿ. ನಿಮ್ಮ ಜ್ಞಾನ ಯುವ ಪೀಳಿಗೆಗೆ ಹೆಚ್ಚು ಪ್ರೇರಣಾದಾಯಕವಾಗಿರಲಿ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...