Thursday, February 5, 2026
Thursday, February 5, 2026

ಜೈರಾಮ್ ರಮೇಶ್ ಅವರಿಗೆ ಕಾಂಗ್ರೆಸ್ ನ ಸೋಷಿಯಲ್& ಡಿಜಿಟಲ್ ಮೀಡಿಯ ಹೊಣೆ

Date:

ಎರಡನೇ ಬಾರಿಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಜೈರಾಮ್ ರಮೇಶ್ ಅವರಿಗೆ ಮಹತ್ವದ ಹುದ್ದೆ ಸಿಕ್ಕಿದೆ.

ಕರ್ನಾಟಕ ಸಂಸದ ಜೈರಾಮ್ ರಮೇಶ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಗುರುವಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಎಐಸಿಸಿಯ ಮಾಹಿತಿ, ಸೋಷಿಯಲ್ , ಡಿಜಿಟಲ್ ಮಿಡಿಯಾ ವಿಭಾಗದ ಉಸ್ತುವಾರಿ ಸಹ ಜೈರಾಮ್ ರಮೇಶ್‌ಗೆ ವಹಿಸಲಾಗಿದೆ ಎಂದು ತಿಳಿದು ಬಂದಿದೆ.

ರಣದೀಪ್ ಸಿಂಗ್ ಸುರ್ಜೇವಾಲ ಅವರು ಎಐಸಿಸಿಯ ಮಾಹಿತಿ, ಸೋಷಿಯಲ್ , ಡಿಜಿಟಲ್ ಮಿಡಿಯಾ ವಿಭಾಗದ ಉಸ್ತುವಾರಿಯಾಗಿದ್ದರು. ಈಗ ಅವರನ್ನು ಬದಲಿಸಿ ಜೈರಾಮ್ ರಮೇಶ್ ಅವರನ್ನು ನೇಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುರ್ಜೇವಾಲ ಕೇವಲ ಕರ್ನಾಟಕ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ.

ಜೈರಾಮ್ ರಮೇಶ್ ಅವರು 2016ರಲ್ಲಿ ಕರ್ನಾಟಕದಿಂದಲೇ ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗ ಮತ್ತೆ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...