Thursday, August 13, 2026
Thursday, August 13, 2026

ಜೈರಾಮ್ ರಮೇಶ್ ಅವರಿಗೆ ಕಾಂಗ್ರೆಸ್ ನ ಸೋಷಿಯಲ್& ಡಿಜಿಟಲ್ ಮೀಡಿಯ ಹೊಣೆ

Date:

ಎರಡನೇ ಬಾರಿಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಜೈರಾಮ್ ರಮೇಶ್ ಅವರಿಗೆ ಮಹತ್ವದ ಹುದ್ದೆ ಸಿಕ್ಕಿದೆ.

ಕರ್ನಾಟಕ ಸಂಸದ ಜೈರಾಮ್ ರಮೇಶ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಗುರುವಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಎಐಸಿಸಿಯ ಮಾಹಿತಿ, ಸೋಷಿಯಲ್ , ಡಿಜಿಟಲ್ ಮಿಡಿಯಾ ವಿಭಾಗದ ಉಸ್ತುವಾರಿ ಸಹ ಜೈರಾಮ್ ರಮೇಶ್‌ಗೆ ವಹಿಸಲಾಗಿದೆ ಎಂದು ತಿಳಿದು ಬಂದಿದೆ.

ರಣದೀಪ್ ಸಿಂಗ್ ಸುರ್ಜೇವಾಲ ಅವರು ಎಐಸಿಸಿಯ ಮಾಹಿತಿ, ಸೋಷಿಯಲ್ , ಡಿಜಿಟಲ್ ಮಿಡಿಯಾ ವಿಭಾಗದ ಉಸ್ತುವಾರಿಯಾಗಿದ್ದರು. ಈಗ ಅವರನ್ನು ಬದಲಿಸಿ ಜೈರಾಮ್ ರಮೇಶ್ ಅವರನ್ನು ನೇಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುರ್ಜೇವಾಲ ಕೇವಲ ಕರ್ನಾಟಕ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ.

ಜೈರಾಮ್ ರಮೇಶ್ ಅವರು 2016ರಲ್ಲಿ ಕರ್ನಾಟಕದಿಂದಲೇ ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗ ಮತ್ತೆ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...