Sunday, December 14, 2025
Sunday, December 14, 2025

ಅಗ್ನಿಪಥ ಕ್ಕೆ ಜೂನ್ 24 ರಿಂದ ನೇಮಕಾತಿ ಪ್ರಕ್ರಿಯೆ ಆರಂಭ

Date:

ಅಗ್ನಿಪಥ’ ಯೋಜನೆಯಡಿ ಜೂನ್ 24 ರಿಂದ ಭಾರತೀಯ ವಾಯುಪಡೆಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ವಾಯುಪಡೆ ಮುಖ್ಯಸ್ಥ ವಿ.ಆರ್ ಚೌಧರಿ ಅವರು ತಿಳಿಸಿದ್ದಾರೆ.

ನಾಲ್ಕು ವರ್ಷಗಳ ಅಲ್ಪಾವಧಿ ನೇಮಕಾತಿ ಯೋಜನೆಯ ಬಗ್ಗೆ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ಸಶಸ್ತ್ರ ಪಡೆಗಳ ನೇಮಕಾತಿಗಾಗಿ ಸರ್ಕಾರವು ಇತ್ತೀಚೆಗೆ ‘ಅಗ್ನಿಪಥ’ ಯೋಜನೆಯನ್ನು ಘೋಷಿಸಿತು. ಯೋಜನೆಗೆ ವಯೋಮಿತಿ ಹದಿನೇಳುವರೆ ವರ್ಷದಿಂದ 21 ವರ್ಷಗಳನ್ನು ನಿಗದಿ ಮಾಡಿತ್ತು. ಆದರೆ, ಮೊದಲ ನೇಮಕಾತಿಯಲ್ಲಿ ವಯೋಮಿತಯನ್ನು 23 ವರ್ಷಗಳಿಗೆ ಹೆಚ್ಚಿಸಲಾಗಿದೆ’ ಎಂದು ಏರ್ ಚೀಫ್ ಮಾರ್ಷಲ್ ಚೌಧರಿ ಹೇಳಿದ್ದಾರೆ.

2022ರ ಅವಧಿಯಲ್ಲಿ ಅಗ್ನಿಪಥ ಯೋಜನೆಯಡಿ ನೇಮಕಗೊಳ್ಳಲು ಗರಿಷ್ಠ ವಯಸ್ಸಿನ ಮಿತಿಯನ್ನು 23ಕ್ಕೆ ಹೆಚ್ಚಿಸಲಾಗಿದೆ.

ಹೀಗಾಗಿ ಹೆಚ್ಚಿನ ಸಂಖ್ಯೆಯ ಯುವಕರು ಹೊಸ ಮಾದರಿಯ ನೇಮಕಾತಿಯ ಅಡಿಯಲ್ಲಿ ವಾಯುಪಡೆ ಸೇರಲಿದ್ದಾರೆ ಎಂದು ಅವರು ಹೇಳಿದರು.

‘ಈ ಬದಲಾವಣೆಯು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಅಗ್ನಿವೀರರಾಗಿ ಸೇರ್ಪಡೆಗೊಳ್ಳಲು ಸಹಾಯವಾಗಲಿದೆ. ವಾಯುಪಡೆಯ ಆಯ್ಕೆ ಪ್ರಕ್ರಿಯೆಯು ಜೂನ್ 24 ರಿಂದ ಪ್ರಾರಂಭವಾಗುತ್ತದೆ’ ಅವರು ಹೇಳಿದರು.

2022ರ ಅವಧಿಯಲ್ಲಿ ಅಗ್ನಿಪಥ ಯೋಜನೆಯಡಿಯಲ್ಲಿ ನೇಮಕಗೊಳ್ಳಲು ಗರಿಷ್ಠ ವಯಸ್ಸಿನ ಮಿತಿಯನ್ನು 21 ರಿಂದ 23 ವರ್ಷಗಳಿಗೆ ಹೆಚ್ಚಿಸಿ ಕೇಂದ್ರ ಸರ್ಕಾರ ಗುರುವಾರ ರಾತ್ರಿ ತೀರ್ಮಾನ ಕೈಗೊಂಡಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...