Friday, March 6, 2026
Friday, March 6, 2026

ಅಡಿಕೆ ಧಾರಣೆ ಬಗ್ಗೆ ಆತಂಕ ಬೇಡ- ಆರಗ ಜ್ಞಾನೇಂದ್ರ

Date:

ಅಡಕೆಗೆ ನಿಗದಿಪಡಿಸಿರುವ ಬೆಲೆಯನ್ನು ಪರಿಷ್ಕರಿಸಿ ಹೆಚ್ಚಳ ಮಾಡುವಂತೆ ಒತ್ತಾಯಿಸಲು ಕೇಂದ್ರ ಸರ್ಕಾರಕ್ಕೆ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ಹಣದುಬ್ಬರ ಹಾಗೂ ಇನ್ನಿತರ ಕಾರಣಗಳಿಂದಾಗಿ ಅಡಕೆ ಬೆಳೆ ಉತ್ಪಾದನಾ ವೆಚ್ಚವೂ ಹೆಚ್ಚಿದ್ದು ಪ್ರಸ್ತುತ ಪ್ರತಿ ಕಿಲೋ ಅಡಕೆ ಅಂದಾಜು ವೆಚ್ಚ ರೂಪಾಯಿ 25 ರಷ್ಟಿದೆ. ಸುಮಾರು ಆರು ವರ್ಷಗಳ ಹಿಂದೆ ಈ ದರ ನಿಗದಿ ಪಡಿಸಲಾಗಿದೆ. ಇದನ್ನು ಸದ್ಯದ ಖರ್ಚುವೆಚ್ಚಗಳಿಗೆ ಅನುಗುಣವಾಗಿ ಪರಿಷ್ಕರಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.

ಅಡಕೆ ಧಾರಣೆ ಸಂಬಂಧ ರೈತರು ಯಾವುದೇ ಆತಂಕ ಪಡುವುದು ಬೇಡ. ರಾಜ್ಯದ ಮಲೆನಾಡು ಭಾಗದ ಲಕ್ಷಾಂತರ ರೈತ ಹಾಗೂ ರೈತ_ಕಾರ್ಮಿಕ ಕುಟುಂಬಗಳ ಆರ್ಥಿಕ ಬೆನ್ನೆಲುಬಾಗಿರುವ ಅಡಕೆ ಬೆಳೆಗೆ ಸುಸ್ಥಿರ ಬೆಲೆ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದ್ದು, ಈ ಕುರಿತು ರೈತ ಸಮುದಾಯ ಯಾವುದೇ ಆತಂಕ ಪಡುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಈ ಹಿಂದೆ ಕೇಂದ್ರ ಸರಕಾರ ದೇಶಿಯ ಅಡಿಕೆ ಉತ್ಪನ್ನ ಅಂದಾಜು ವೆಚ್ಚವನ್ನು ಹೆಚ್ಚಳ ಮಾಡಿದಾಗ, ವಿದೇಶದಿಂದ ಅಮದಾಗುತ್ತಿದ್ದ ಕಡಿಮೆ ಗುಣಮಟ್ಟದ ಅಡಿಕೆ ಪ್ರಮಾಣ ಗಣನೀಯವಾಗಿ ತಗ್ಗಿತ್ತು. ವಿದೇಶದಿಂದ ಆಮದಾಗುವ ಅಡಿಕೆ, ಗುಣಮಟ್ಟದಲ್ಲಿ ಅತ್ಯಂತ ನಿಕೃಷ್ಟ ವಾಗಿದ್ದು ದೇಶಿಯ ಅಡಿಕೆ, ಗುಣಮಟ್ಟದಲ್ಲಿ ಆತ್ಯುಕೃಷ್ಟ ವಾಗಿದೆ ಎಂದು, ಪ್ರಮಾಣೀಕೃತ ವಾಗಿದೆ ಎಂದೂ ತಿಳಿಸಿದ್ದಾರೆ.

ಕೇಂದ್ರ ಕೃಷಿ ಸಚಿವರನ್ನು ರಾಜ್ಯ ಟಾಸ್ಕ್ ಫೋರ್ಸ್ ನಿಯೋಗ ಭೇಟಿಯಾಗಿ, ಅಡಿಕೆ ಉತ್ಪನ್ನ ಅಂದಾಜು ವೆಚ್ಚ ಪರಿಷ್ಕರಿಸಿ ಹೆಚ್ಚಳ ಮಾಡಲು ಮನವರಿಕೆ ಮಾಡಿ ಕೊಡಲಾಗುವುದು, ರೈತರು ಅಡಿಕೆ ಧಾರಣೆ ಬಗ್ಗೆ ಯಾವುದೇ ಆತಂಕ ಹಾಗೂ ಭಯಪಡುವುದು ಬೇಡ ಎಂದೂ ಸಚಿವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Sanga ಮಾರ್ಚ್ 09 ಕರ್ನಾಟಕ ಸಂಘದಲ್ಲಿ ಸಾಹಿತಿ ರಂಜನಿ ರಾಘವನ್ ತಿಂಗಳ ಅತಿಥಿ

Karnataka Sanga ದಿನಾಂಕ 09ನೇ ಮಾರ್ಚ್ 2026ರ ಸೋಮವಾರ, ಸಂಜೆ 5:30ಕ್ಕೆ...

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ...

Klive Special Article ನಿಮ್ಮೂರು ನಮ್ಮ ಮಾಹಿತಿ ಸ್ಥಳ: ಸುಣ್ಣದಹಳ್ಳಿ ಲೇ: ದಿಲೀಪ್ ನಾಡಿಗ್

Klive Special Article ಸುವರ್ಣ ಹಳ್ಳಿ ಕಾಲಕ್ರಮೇಣ ಸುಣ್ಣದ ಹಳ್ಳಿಯಾಯಿತು. ಇಲ್ಲಿದ್ದಾನೆ...

Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...