Friday, June 19, 2026
Friday, June 19, 2026

ಸುವರ್ಣಪದಕ ಬಾಚಿದ ಪ್ರತಿಭಾಸಂಪನ್ನ ವಿದ್ಯಾರ್ಥಿನಿಯರು

Date:

ಕುವೆಂಪು ವಿಶ್ವವಿದ್ಯಾಲಯದಲ್ಲಿ ಈ ಬಾರಿಯು ವಿದ್ಯಾರ್ಥಿನಿಯರು ಚಿನ್ನದ ಬೇಟೆ ಮುಂದುವರೆಸಿದ್ದಾರೆ.

31 ಮತ್ತು 32ನೇ ಘಟಿಕೋತ್ಸವದಲ್ಲಿ ಅತಿ ಹೆಚ್ಚು ಚಿನ್ನದ ಪದಕ ಮತ್ತು ನಗದು ಪುರಸ್ಕಾರಗಳನ್ನು ವಿದ್ಯಾರ್ಥಿನಿಯರೆ ಬಾಚಿಕೊಂಡಿದ್ದಾರೆ.
ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಘಟಿಕೋತ್ಸವವನ್ನು ಆಯೋಜಿಸಲಾಗಿತ್ತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಸನ್ಮಾನಿಸಿದ್ದಾರೆ.

31ನೇ ಘಟಿಕೋತ್ಸವದಲ್ಲಿ ಕನ್ನಡ ಎಂ.ಎ ವಿಭಾಗದ ಪ್ರಣೀತಾ ಎಂ.ಟಿ ಅವರು 8 ಸ್ವರ್ಣ ಪದಕ ಮತ್ತು 2 ನಗದು ಬಹುಮಾನ ಪಡೆದಿದ್ದಾರೆ. ಎಂಬಿಎ ವಿಭಾಗದ ಯತೀಶ್ ಕೆ.ಯು, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಎಂ.ಎಸ್ಸಿ ಜೈವಿಕ ತಂತ್ರಜ್ಞಾನ ವಿಭಾಗದ ಅನುಷಾ ಎಸ್, ಎನ್.ಇ.ಎಸ್. ಇನ್ಸ್ ಟಿಟ್ಯೂಟ್ ಆಪ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ಬಿ.ಕಾಂ ವಿಭಾಗದ ನಿವ್ಯಾ ಕೆ.ನಾಯಕ್ ಅವರು ತಲಾ 5 ಸ್ವರ್ಣ ಪದಕ ಪಡೆದಿದ್ದಾರೆ.

ಎಂ.ಎ ಸಮಾಜಶಾಸ್ತ್ರ ವಿಭಾಗದ ನವೀನ್ ಕುಮಾರ್.ಸಿ, ಎಂ.ಎಸ್ಸಿ ಸಸ್ಯಶಾಸ್ತ್ರ ವಿಭಾಗದ ರಕ್ಷಿತಾ ಹೆಚ್.ಎಂ ಜೈನ್, ರಸಾಯನಶಾಸ್ತ್ರ ವಿಭಾಗದ ದಿವ್ಯಾ ಎಂ.ಸಿ, ಪರಿಸರ ವಿಜ್ಞಾನ ವಿಭಾಗದ ಸಂಪದಾ ಶಾಸ್ತ್ರಿ ತಲಾ 4 ಸ್ವರ್ಣ ಪದಕಗಳನ್ನು ಪಡೆದಿದ್ದಾರೆ.

ಎಂ.ಎ ರಾಜ್ಯಶಾಸ್ತ್ರ ವಿಭಾಗದ ಸೌರಭ ಎಸ್.ಕಾಮತ್, ಉರ್ದು ವಿಭಾಗದ ಅಬ್ದುಲ್ ಫತಾ, ಇತಿಹಾಸ ಹಾಗೂ ಪ್ರಾಕ್ತನಶಾಸ್ತ್ರ ವಿಭಾಗದ ಶ್ವೇತಾ ಎಸ್, ಎಂ.ಎಸ್ಸಿ ಪ್ರಾಣಿಶಾಸ್ತ್ರ ವಿಭಾಗದ ಸರಳ ವೈ.ಪಿ, ಎಂ.ಸಿ.ಎ ಸಂಜನಾ ಕೆ ಅವರು ತಲಾ 3 ಸ್ವರ್ಣ ಪದಕ ಪಡೆದಿದ್ದಾರೆ.

32ನೇ ಘಟಿಕೋತ್ಸವ
ಎಂ.ಎ ಕನ್ನಡ ವಿಭಾಗದ ದಿವ್ಯಾ ಹೆಚ್.ಎನ್ ಅವರು 11 ಚಿನ್ನದ ಪದಕ ಹಾಗೂ 2 ನಗದು ಬಹುಮಾನ ಪಡೆದರೆ, ಎಂಬಿಎ ವಿಭಾಗದ ಪ್ರಿಯಾಂಕಾ ಟಿ ಅವರು 6 ಸ್ವರ್ಣ ಪದಕಗಳನ್ನು ಪಡೆದುಕೊಂಡರು.

ಎಂ.ಎ ಸಮಾಜಶಾಸ್ತ್ರ ವಿಭಾಗದ ತನೂಷಾ, ಎಂ.ಎಸ್ಸಿ ರಸಾಯನಶಾಸ್ತ್ರ ವಿಭಾಗದ ಸಂಯುಕ್ತಾ ಪೈ, ಎ.ಟಿ.ಎನ್.ಸಿ ಕಾಲೇಜು ಬಿ.ಕಾಂ ವಿದ್ಯಾರ್ಥಿನಿ ಮೇಘನಾ.ವಿ ಅವರು ತಲಾ 5 ಸ್ವರ್ಣ ಪದಕಗಳನ್ನು ಪಡೆದಿದ್ದಾರೆ.

ಎಂ.ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಂಜುಮ್ ಬಷೀರ್ ಸಾಬ್ , ಎಂ.ಎ ಇಂಗ್ಲೀಷ್ ವಿಭಾಗದ ಅಲೀಶಾ ಜೋಸೆಫ್, ಎಂ.ಕಾಂ ವಿಭಾಗದ ಗಾಯತ್ರಿ ಕೆ.ಎ, ಎಂ.ಸಿ.ಎ ವಿಭಾಗದ ರಂಜಿತಾ ಸಿ.ಕೆ, ಎಂ.ಎಸ್ಸಿ ಸಸ್ಯಶಾಸ್ತ್ರ ವಿಭಾಗದ ಯಶಸ್ವಿನಿ ಎಂ, ಎಂ.ಎಸ್ಸಿ ಪ್ರಾಣಿಶಾಸ್ತ್ರ ವಿಭಾಗದ ರುಚಿತಾಶ್ರೀ, ಎಂ.ಎಸ್ಸಿ ಜೀವ ರಸಾಯನಶಾಸ್ತ್ರ ವಿಭಾಗದ ಸೃಷ್ಟಿ ಬಿ.ಎಂ ಅವರು ತಲಾ 3 ಸ್ವರ್ಣ ಪದಕ ಪಡೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...