Monday, December 15, 2025
Monday, December 15, 2025

ಭಾರತವನ್ನ ಬಿಟ್ಟರೆ ನಮಗೆ ಒಂಟಿತನ ಕಾಡುತ್ತದೆ-ಬಿಲಾವಲ್ ಬುಟ್ಟೊ

Date:

ಪಾಕಿಸ್ತಾನ ಈಗಾಗಲೇ ಜಾಗತಿಕವಾಗಿ ಒಬ್ಬಂಟಿಯಾಗಿದೆ. ಹಾಗಾಗಿ ಭಾರತದೊಂದಿಗೆ ನಮ್ಮ ಸ್ನೇಹವನ್ನು ಮತ್ತೆ ಆರಂಭಿಸಬೇಕು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಬುಟ್ಟೋ ಜರ್ಧಾರಿ ಅವರು ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಭಾರತದ ರಾಜಕೀಯ ನೀತಿಗಳು, ಮುಸ್ಲಿಂ ವಿರೋಧಿ ನಿಲುವುಗಳಿಂದ ನಮ್ಮ ಅವರ ಸಂಬಂಧ ಕಠಿಣವಾಗಿದೆ. ಕೆಲವು ವಿಚಾರಗಳಲ್ಲಿ ನಾವು ಅವರಿಗೆ ವಿರೋಧ ವ್ಯಕ್ತಪಡಿಸಿದ್ದೇವೆ. ಆದರೆ ಅವರ ಜೊತೆಗೆ ನಾವು ಮಾತನಾಡದಿದ್ದರೆ ನಮ್ಮ ಆಸಕ್ತಿಗಳನ್ನು ಅವರ ಜೊತೆಗೆ ಹೇಗೆ ಹಂಚಿಕೊಳ್ಳಲು ಸಾಧ್ಯ ಎಂದರು.

ನಾವು ಭಾರತದೊಂದಿಗೆ ಗಂಭೀರವಾದ ಸಮಸ್ಯೆಗಳನ್ನ ಹೊಂದಿದ್ದೇವೆ.
ಇತಿಹಾಸವನ್ನು ತೆಗೆದು ನೋಡಿದರೆ ಅವರ ಜೊತೆಗೆ ಯುದ್ದಗಳೂ ಆಗಿವೆ. ಆದರೆ ಅವರ ಜೊತೆಗೆ ಸಂಬಂಧವನ್ನ ಕಳೆದು ಕೊಳ್ಳಲು ಸಾಧ್ಯವಾಗುತ್ತಾ? ಒಬ್ಬ ವಿದೇಶಾಂಗ ಸಚಿವನಾಗಿ ನಾನು ಅಲ್ಲಿನ ಜನರ ಜೊತೆಗೆ ಮಾತನಾಡದೇ ಅಲ್ಲಿನ ಸರ್ಕಾರದ ಜೊತೆ ಮಾತನಾಡದೇ ನಮ್ಮ ಹಿತಾಸಕ್ತಿಗಳನ್ನು, ನಮ್ಮ ಉದ್ದೇಶಗಳನ್ನು ಹೇಗೆ ಹಂಚಿಕೊಳ್ಳಲು ಆಗುತ್ತದೆ ಎಂದು ಪ್ರಶ್ನಿಸಿದರು.

ಇದಲ್ಲದೇ ಭಾರತದೊಂದಿಗೆ ನಾವು ವ್ಯಾಪಾರ ಮಾಡಲು ಸಾಧ್ಯವಿಲ್ಲ ಎಂದು ಕೆಲವರು ಹೇಳುತ್ತಾರೆ. ನನಗೆ ಆ ರೀತಿಯ ವಿಮರ್ಶೆಗಳೇ ತಪ್ಪು ಎಂದೆನಿಸುತ್ತದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...

JCI Shimoga ಜೀವನ ಮೌಲ್ಯಗಳನ್ನ ಅಳವಡಿಸಿಕೊಂಡಾಗ ಮಾತ್ರ ಸಾರ್ಥಕ ಬದುಕು- ಮಲ್ಲಿಕಾರ್ಜುನ ಕಾನೂರ್

JCI Shimoga ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಮೌಲ್ಯಯುತ ಜೀವನಶೈಲಿ ಅಗತ್ಯ. ಮಾನವೀಯ...

Chamber of Commerce Shivamogga ಡಿಸೆಂಬರ್ 16. ಧ್ಯಾನದಿಂದ ಒತ್ತಡ ನಿರ್ವಹಣೆ, ಮಾನಸಿಕ ಆರೋಗ್ಯ ರಕ್ಷಣೆ ಬಗ್ಗೆ ಕಾರ್ಯಾಗಾರ

Chamber of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ...