Friday, October 4, 2024
Friday, October 4, 2024

ಕಾಂಗ್ರೆಸ್ ಗೆ ಕಾಯಕಲ್ಪ ನೀಡಲುಹಿರಿಯ ಕಾಗೋಡು ತಿಮ್ಮಪ್ಪ ಕರೆ

Date:

ಕಾಂಗ್ರೆಸ್ ಅನೇಕ ವರ್ಷಗಳ ಕಾಲ ಆಡಳಿತ ನಡೆಸಿದ ಪರಿಣಾಮ ಕಾರ್ಯಕರ್ತರಲ್ಲಿ ಬೇಜವಾಬ್ದಾರಿತನ ಬಂದಿದೆ.‌
ಇದರಿಂದ ಪಕ್ಷವನ್ನು ಈಗ ಬೂತ್ ಮಟ್ಟದಿಂದ ಕಟ್ಟಬೇಕಿದೆ. ಪ್ರಮುಖ ಕಾರ್ಯಕರ್ತರಿಗೆ ತಿಳಿವಳಿಕೆ ಮತ್ತು ಜಾಗೃತಿ ನೀಡುವ ಉದ್ದೇಶದಿಂದ ಶಿಬಿರ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ದುರ್ಬಲವಾಗುತ್ತಿದೆ. ಇದರಿಂದ ಪಕ್ಷವನ್ನು ಸದೃಢಗೊಳಿಸಲು ನವ ಸಂಕಲ್ಪ ಚಿಂತನಾ ಶಿಬಿರವನ್ನು ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ಸಾಗರದಲ್ಲಿ ನಡೆದ ಜಿಲ್ಲಾಮಟ್ಟದ ನವ ಸಂಕಲ್ಪ ಚಿಂತನಾ ಶಿಬಿರದಲ್ಲಿ‌ ಭಾಗಿಯಾಗಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ತೀರ ಕೆಳಮಟ್ಟದಿಂದ ಸಂಘಟಿಸುವ ಅವಶ್ಯಕತೆ ಇದೆ.‌ ಕಾಂಗ್ರೆಸ್ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಪಕ್ಷವಾಗಿದೆ. ಸ್ವಾತಂತ್ರ್ಯದ ಬಳಿಕ ದೇಶವನ್ನು ಸದೃಢವಾಗಿ ಕಟ್ಟಿದೆ. ಆದರೆ, ಇತ್ತೀಚೆಗೆ ಪಕ್ಷ ದುರ್ಬಲವಾಗುತ್ತಿದೆ ಎಂದರು.

ಈ ಬಗ್ಗೆ ಕಾರ್ಯಕರ್ತರಲ್ಲಿ ಚಿಂತನೆಯನ್ನುಂಟು ಮಾಡಬೇಕಿದೆ.‌ ಕಾಂಗ್ರೆಸ್ ಬಹಳ ವರ್ಷಗಳ ಕಾಲ ಆಡಳಿತ ನಡೆಸಿದ ಪರಿಣಾಮ ಕಾರ್ಯಕರ್ತರಲ್ಲಿ ಬೇಜವಾಬ್ದಾರಿತನ ಬಂದಿದೆ.‌ ಇದರಿಂದ ಪಕ್ಷವನ್ನು ಈಗ ಬೂತ್ ಮಟ್ಟದಿಂದ ಕಟ್ಟಬೇಕಿದೆ. ಪ್ರಮುಖ ಕಾರ್ಯಕರ್ತರಿಗೆ ತಿಳಿವಳಿಕೆ ಮತ್ತು ಜಾಗೃತಿ ನೀಡುವ ಉದ್ದೇಶದಿಂದ ಶಿಬಿರ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ, ಮಾತನಾಡಿದ ಮಾಜಿ ಶಾಸಕ ಮಧು ಬಂಗಾರಪ್ಪ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಥಳೀಯವಾಗಿ ಪ್ರಣಾಳಿಕೆಯನ್ನು ತಯಾರು ಮಾಡುತ್ತಿದೆ. ರಾಜ್ಯದ ಪ್ರಣಾಳಿಕೆ ಬೇರೆ ಆಗಿರುತ್ತದೆ. ಸ್ಥಳೀಯ ಸಮಸ್ಯೆಗಳನ್ನು ಒಳಗೊಂಡ ಪ್ರಣಾಳಿಕೆ ಇದಾಗಿರುತ್ತದೆ. ಮಲೆನಾಡಿನಲ್ಲಿ ಭೂಹಕ್ಕು, ಅರಣ್ಯ ಸಮಿತಿ ಬಗರ್ ಹುಕುಂ ಸಮಸ್ಯೆಯನ್ನು ಪ್ರಣಾಳಿಕೆಯಲ್ಲಿ‌ ಸೇರ್ಪಡೆ‌ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...