Thursday, October 3, 2024
Thursday, October 3, 2024

ಪ್ರಧಾನಿ ಮೈಸೂರು ಭೇಟಿ: ಪೋಲಿಸ್ ಇಲಾಖೆಯ ಮಾರ್ಗಸೂಚಿ

Date:

ಮೈಸೂರು ನಗರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಜೂನ್‌ 21ಕ್ಕೆ ಅರಮನೆ ಆವರಣದಲ್ಲಿ ನಡೆಯಲಿರುವ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ.

ಈ ಹಿನ್ನೆಲೆ ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತ ಕಾರ್ಯಕ್ರಮದ ಮಾರ್ಗಸೂಚಿ ಪ್ರಕಟಿಸಿದ್ದಾರೆ.

ಪ್ರವೇಶ ದ್ವಾರದಲ್ಲಿ ಭದ್ರತಾ ಸಿಬ್ಬಂದಿಗಳ ತಪಾಸಣೆಗೆ ಸಹಕರಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ನೀರಿನ ಬಾಟಲ್, ಗಾಜಿನ ಬಾಟಲ್, ಬ್ಯಾಗ್, ವ್ಯಾನಿಟಿ ಬ್ಯಾಗ್‌ ಹರಿತವಾದ ವಸ್ತು ಯಾವುದೇ ರೀತಿಯ ಆಯುಧಗಳು, ಲೋಹದ ವಸ್ತುಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಯಾವುದೇ ರೀತಿಯ ಕರಪತ್ರ, ಬ್ಯಾನರ್, ಕಪ್ಪು ಬಟ್ಟೆ, ಬಾವುಟ ಭಿತ್ತಿಪತ್ರಕ್ಕೆ ಅವಕಾಶವಿಲ್ಲ. ಮೊಬೈಲ್‌ ಹೊರತುಪಡಿಸಿ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶ ಇಲ್ಲ. ಕ್ಯಾಮರಾ, ವಿಡಿಯೋಕ್ಯಾಮರಾ, ಪವರ್ ಬ್ಯಾಂಕ್ ಇಯರ್‌ಫೋನ್‌‌ಗೆ ಅವಕಾಶ ಇಲ್ಲ. ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಬೇಕು. ಬೆಂಕಿ ಉತ್ಪತ್ತಿ ಮಾಡುವ ಬೆಂಕಿಪೊಟ್ಟಣ, ಲೈಟರ್, ಪಟಾಕಿ ಹಾಗೂ ಇತ್ಯಾದಿ ವಸ್ತುಗಳಿಗೂ ನಿರ್ಬಂಧ ವಿಧಿಸಲಾಗಿದೆ. ಕರ್ಕಶ ಶಬ್ದ ಮಾಡುವ ಪೀಪಿ, ತಮಟೆ, ನಗಾರಿ ಇತ್ಯಾದಿ ವಸ್ತುಗಳನ್ನು ನಿಷೇಧಿಸಲಾಗಿದೆ.

ವಾರಸುದಾರರಿಲ್ಲದ ಬ್ಯಾಗುಗಳು, ಪೊಟ್ಟಣ, ಆಟದ ಸಾಮಾನು ಇತರೆ ವಸ್ತುಗಳು ಕಂಡು ಬಂದಲ್ಲಿ ಅದನ್ನು ಮುಟ್ಟದೇ ಕೂಡಲೇ ಪೋಲೀಸರಿಗೆ ಮಾಹಿತಿ ನೀಡಬೇಕು. ಇದು ಜೂನ್ 20ರಂದು ಮಹಾರಾಜ‌ ಕಾಲೇಜು ಮೈದಾನದಲ್ಲಿ   ನಡೆಯುವ ಫಲಾನುಭವಿಗಳ ಸಂವಾದ ಸಮಾವೇಶಕ್ಕೂ ಅನ್ವಯವಾಗಲಿದೆ. ಕೇಂದ್ರದ ಯೋಜನೆಯ ಫಲಾನುಭವಿಗಳ ಜೊತೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...

Navaratri Festival ಬಂಗಾರಮಕ್ಕಿಯಲ್ಲಿ ಶರನ್ನವರಾತ್ರಿ ಉತ್ಸವ

Navaratri Festival ಬಂಗಾರಮಕ್ಕಿಯ ಹೇಮಪುರ ಮಹಾಪೀಠದ ಶ್ರೀ ವಿಶ್ವ ವೀರಾಂಜನೇಯ...

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...