Sunday, February 9, 2025
Sunday, February 9, 2025

ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಸಹಕಾರಿ- ವೈಶಾಲಿ

Date:

ಪ್ರತಿಯೊಬ್ಬರ ಶರೀರ ಹಾಗೂ ಮಾನಸಿಕ ಸ್ವಾಸ್ತ್ಯ ಕಾಪಾಡಿಕೊಳ್ಳಲು ಪ್ರತಿ ನಿತ್ಯ ಯೋಗ ಅಭ್ಯಾಸ ರೂಢಿಸಿಕೊಳುವುದು ಅವಶ್ಯಕ ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ಎಂ.ವಿ.ವೈಶಾಲಿ ತಿಳಿಸಿದ್ದಾರೆ.

ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಗಳು 8ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಆಯೋಜಿಸಿದ್ದ ಒಂದು ದಿನದ ವಿಶ್ವವಿದ್ಯಾಲಯ ಮಟ್ಟದ ಯೋಗ ಕಾರ್ಯಾಗಾರ ಉದ್ಘಾಟಿಸಿ ಮಾತನಾಡುತ್ತಿದ್ದರು.

ಇಂದಿನ ಯುವ ಜನತೆ ಆಧುನಿಕ ತಂತ್ರಜ್ಞಾನ, ಸಾಮಾಜಿಕ ಜಾಲ ತಾಣಗಳಲ್ಲಿ ಹೆಚ್ಚನ ಸಮಯ ಕಳೆಯುತ್ತಿದ್ದಾರೆ. ಆ ಕಾರಣಕ್ಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಇದು ಅವರ ಭವಿಶ್ಯದ ಮೇಲೆ ದೀರ್ಘಾವಧಿ ಪರಿಣಾಮ ಬೀರುತ್ತದೆ. 20ರಿಂದ 30ರ ವಯಸ್ಸಿನ ಅವಧಿ ಅತ್ಯಂತ ಪ್ರಮುಖವಾದದ್ದು. ಅನಾರೋಗ್ಯ ಬರದಂತೆ ನೋಡಿಕೊಳ್ಳಲು, ಅದರಿಂದ ಪಾರಾಗಲು ಯೋಗಾಭ್ಯಾಸ ಅನಿಯಾರ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶಿವಗಂಗಾ ಯೋಗ ಕೇಂದ್ರದ ಯೋಗ ಗುರುಗಳಾದ ರುದ್ರಾರಾಧ್ಯ ಮಾತನಾಡಿ ಯುವಕರು ಹೊರಗಿನ ಪ್ರಪಂಚಕ್ಕೆ ಮಾರುಹೋಗದೇ ತಮ್ಮ ಒಳ ಮನಸ್ಸಿನ ಪರಿಶುದ್ಧತೆಗೆ ಗಮನ ನೀಡಬೇಕು. ಉತ್ತಮ ಜೀವನ ಶೈಲಿಯತ್ತ ತಮ್ಮ ಚಿತ್ತ ಹರಿಸಬೇಕು. ಅದಕ್ಕೆ ಯೋಗಾಭ್ಯಾಸವೊಂದೇ ದಾರಿ ಎಂದು ಕಿವಿ ಮಾತು ಹೇಳಿದ್ದಾರೆ.

ಪರಿಸರ ನಾಗರಾಜ್, ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ, ಡಿವಿಎಸ್ ಕಾಲೇಜಿನ ಡಾ.ಕೆ.ಜಿ.ವೆಂಕಟೇಶ, ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಎಂ.ಟಿ. ಎಪಿಎಂಸಿ ಮಾಜಿ ಅಧ್ಯಕ್ಷರಾದ ಎಸ್.ಎಸ್.ಜ್ಯೋತಿಪ್ರಕಾಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶಿವಮೊಗ್ಗ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕೆಲವು ಮೆಲುಕುಗಳು

ಲೇ: ಗೋಪಾಲ್ ಯಡಗೆರೆ.ಹಿರಿಯ ವರದಿಗಾರರು. ಕನ್ನಡಪ್ರಭ. ಶಿವಮೊಗ್ಗ Klive Special Article ...

Warrant Officer Manjunath ಸ್ಕೈ ಡೈವಿಂಗ್ ಸಂದರ್ಭದಲ್ಲಿ‌ ಪ್ಯಾರಾಚ್ಯೂಟ್ ತೆರೆಯದೇ ಏರ್ ಫೋರ್ಸ್ ಅಧಿಕಾರಿ ಮಂಜುನಾಥ್ ಮರಣ

Warrant Officer Manjunath ಸ್ಕೈ ಡೈವಿಂಗ್ ವೇಳೆ ಪ್ಯಾರಚ್ಯೂಟ್ ತೆರೆಯದೆ ಏರ್ಫೋರ್ಸ್...

Guarantee scheme ರಾಜ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷರ ಮೆಚ್ಚುಗೆ

Guarantee scheme ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು...

DC Shivamogga ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ‌ಕ್ಕೆ ಒತ್ತು‌ ನೀಡಲಾಗುವುದು- ಗುರುದತ್ತ ಹೆಗಡೆ

DC Shivamogga ಕೈಗಾರಿಕಾ ಪ್ರದೇಶಗಳಲ್ಲಿ ಕುಡಿಯುವ ನೀರು, ಬೀದಿ ದೀಪ,...