ಶ್ರೀಲಂಕಾದ ಮಾಜಿ ಕ್ರಿಕೆಟಿಗ ರೋಶನ್ ಮಹಾನಾಮ ಪೆಟ್ರೋಲ್ ಬಂಕ್ ಮುಂದೆ ಸರದಿಯಲ್ಲಿ ನಿಂತಿರುವ ಜನರಿಗೆ ಟೀ ಹಾಗೂ ಬನ್ ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಆರ್ಥಿಕ ಸಂಕಷ್ಟದ ಸ್ಥಿತಿಯಲ್ಲಿರುವ ಶ್ರೀಲಂಕಾದಲ್ಲಿ ಜನರು ಪ್ರತಿನಿತ್ಯ ಪೆಟ್ರೋಲ್, ಡೀಸೆಲ್, ಆಹಾರ ಸೇರಿದಂತೆ ಹಲವೆಡೆ ಸರದಿ ಸಾಲಿನಲ್ಲಿ ನಿಂತಿದ್ದಾರೆ.
ಅಗತ್ಯ ವಸ್ತುಗಳಿಗೆ ಜನರು ಸರದಿಯಲ್ಲಿ ನಿಂತಿದ್ದರಿಂದ ಮಾಜಿ ಕ್ರಿಕೆಟಿಗ ಅವರಿಗೆ ನೆರವು ನೀಡುತ್ತಿದ್ದಾರೆ.
ನಾವು ಒಂದು ತಂಡವಾಗಿ ಪ್ರತಿನಿತ್ಯ ಜನರಿಗೆ ಟೀ ಬನ್ಸ್ ವಿತರಿಸುತ್ತಿದ್ದೇವೆ. ಕೆಲವು ಬಾರಿ ಸಂಜೆ ಊಟದ ವ್ಯವಸ್ಥೆ ಮಾಡುತ್ತಿದ್ದೇವೆ. ಜನರು ಅಗತ್ಯ ವಸ್ತುಗಳಿಗಾಗಿ ಇಡೀ ದಿನ ರಸ್ತೆಯಲ್ಲಿ ನಿಂತಿರುವುದು ನೋಡುವುದು ಕಷ್ಟ ಎಂದು ಅವರು ಹೇಳಿದ್ದಾರೆ.