Friday, May 1, 2026
Friday, May 1, 2026

ಪ್ರಧಾನಿ ಕರ್ನಾಟಕ ಭೇಟಿ: ಸಿದ್ಧರಾಮಯ್ಯ ವ್ಯಂಗ್ಯ

Date:

ರಾಜ್ಯದಲ್ಲಿ 2019 ಮತ್ತು 2020 ರಲ್ಲಿ ದೊಡ್ಡ ಪ್ರವಾಹ ಬಂದಾಗ ಪ್ರಧಾನಿ ಅವರು ಇಲ್ಲಿಗೆ ಬರಲಿಲ್ಲ. ನೊಂದ ಜನರಿಗೆ ಸಾಂತ್ವನ ಹೇಳಲಿಲ್ಲ. ಆದರೆ, ಈಗ ಅವರಿಗೆ ಕರ್ನಾಟಕದ ನೆನಪಾಗಿದೆ ಎಂದು ಪ್ರಧಾನಿ ಮೋದಿ ರಾಜ್ಯ ಪ್ರವಾಸದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವ್ಯಂಗ್ಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಕೊರೋನಾ ವೇಳೆ ಮೋದಿ ರಾಜ್ಯದ ಜನರಿಗೆ ಆಕ್ಸಿಜನ್ ಕೊಟ್ಟಿದ್ದಾರಾ? ಹೈಕೋರ್ಟ್ ಹೇಳಿದರೂ ಆಕ್ಸಿಜನ್ ಕೊಟ್ಟಿರಲಿಲ್ಲ. ಸುಪ್ರೀಂಕೋರ್ಟ್ ಚಾಟಿಬೀಸಿದ ಮೇಲೆ ಕೊಟ್ಟರು. ಆಕ್ಸಿಜನ್ ಇಲ್ಲದೆ ಸಾವಿರಾರು ಜನ ಸತ್ತರು. ಚಾಮರಾಜನಗರದಲ್ಲಿ 36 ಜನ ಸಾವನ್ನಪ್ಪಿದರು.ರಾಜ್ಯದ ಬೇರೆಡೆಯೂ ಆಕ್ಸಿಜನ್ ಇಲ್ಲದೆ ಸತ್ತರು .ಇದಕ್ಕೆಲ್ಲ ಯಾರು ಕಾರಣ ? ಇದೇ ಮೋದಿಯವರು ಎಂದು ಆರೋಪಿಸಿದ್ದಾರೆ.

ತೆರಿಗೆ ಪಾಲು ರಾಜ್ಯಕ್ಕೆ ಕಡಿಮೆಯಾಗುತ್ತಿದೆ. ರಾಜ್ಯವೊಂದೇ 19 ಲಕ್ಷ ಕೋಟಿ ಹಣವನ್ನು ಕೊಟ್ಟಿದೆ.ತೆರಿಗೆ ಮೂಲಕ ಕಲೆಕ್ಟ್ ಮಾಡಿದ ಹಣ ನೀಡಿದೆ. ನಮಗೆ 45 ಸಾವಿರ ಕೋಟಿ ರೂ. ತೆರಿಗೆ ಬಾಕಿ ಬರಬೇಕು. ಆದರೆ ಬಂದಿಲ್ಲ. ಕೇಂದ್ರ ಹಣಕಾಸು ಸಚಿವರು ನಮ್ಮ ರಾಜ್ಯದವರೇ. 15 ಪೇ ಕಮಿಷನ್ ಹಣ ವನ್ನೂ ನೀಡಲಿಲ್ಲ. ರಾಜ್ಯಕ್ಕೆ ಬರುವ ಶೇ 1.07 ಹಣ ಕಡಿಮೆಯಾಯಿತು ಎಂದು ಆಪಾದಿಸಿದ್ದಾರೆ.

ಆಕ್ಸಿಜನ್ ಕೊಡುವುದಕ್ಕೆ ಆಗದವರು ಈಗ ಯೋಗ ಮಾಡುವುದಕ್ಕೆ ಬಂದಿದ್ದಾರೆ.ಆಕ್ಸಿಜನ್ ಬಗ್ಗೆ ಪ್ರಧಾನಿಯವರು ಹೇಳಬೇಕು.40 % ಕಮಿಷನ್ ಬಗ್ಗೆ ದೂರು ಕೊಟ್ಟರು ಯಾಕೆ‌ ಚೌಕಿದಾರ್ ಇಲ್ಲಿಯವರೆಗೆ ಉತ್ತರ ಕೊಟ್ಟಿಲ್ಲ ?ಸಬರ್ಬನ್ ಯೋಜನೆ ಹೇಳುತ್ತಲೇ ಬರುತ್ತಿದ್ದಾರೆ. ಅನಂತ್ ಕುಮಾರ್ ಕಾಲದಿಂದ ಹೇಳುತ್ತಿದ್ದಾರೆ.

ಆದರೆ, ಯೋಜನೆ ಮಾತ್ರ ಏನೂ ಆಗಿಲ್ಲ. ಮೋದಿಯವರಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಅವರ ಸರ್ಕಾರ ಕರ್ನಾಟಕದಲ್ಲಿದ್ದು, ಲೂಟಿ ಹೊಡೆಯುತ್ತಿದೆ. ಭ್ರಷ್ಟಾಚಾರ ಹೆಚ್ಚಾಗುತ್ತಿದೆ.ಇದಕ್ಕೆಲ್ಲ ಪ್ರಧಾನಿಯವರು ಅನುಮತಿ ಕೊಟ್ಟಿದ್ದಾರಾ? ಈ ನಮ್ಮ ಪ್ರಶ್ನೆಗೆ ಅವರು ಉತ್ತರ ಕೊಡಲಿ ಎಂದು ಸವಾಲು ಹಾಕಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಂಕರಘಟ್ಟದ ಕಾಲೇಜಿನ ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತದಲ್ಲಿ ಈರ್ವರ ಸಾವು : ಸಂಸದ ರಾಘವೇಂದ್ರ ಸಂತಾಪ

B.Y. Raghavendra ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

S.N. Channabasappa ನಗರದ ಬಡಾವಣೆಗಳಲ್ಲಿನ ಚರಂಡಿ ಸಮಸ್ಯೆ ತ್ವರಿತ ಬಗೆಹರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಬಡಾವಣೆಗಳಲ್ಲಿನ ಚರಂಡಿ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ...

B.Y. Raghavendra ಪ್ರವಾಸಿ ತಾಣವಾಗಿ ಜೋಗದ ಅಭಿವೃದ್ದಿ ಕಾಮಗಾರಿ ಶೀಘ್ರ ಪೂರೈಸಲು ಸಂಸದ ರಾಘವೇಂದ್ರ ಸೂಚನೆ

B.Y. Raghavendra ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣವಾದ ಜೋಗ ಜಲಪಾತವನ್ನು...