Saturday, July 11, 2026
Saturday, July 11, 2026

ಪ್ರಧಾನಿ ಕರ್ನಾಟಕ ಭೇಟಿ: ಸಿದ್ಧರಾಮಯ್ಯ ವ್ಯಂಗ್ಯ

Date:

ರಾಜ್ಯದಲ್ಲಿ 2019 ಮತ್ತು 2020 ರಲ್ಲಿ ದೊಡ್ಡ ಪ್ರವಾಹ ಬಂದಾಗ ಪ್ರಧಾನಿ ಅವರು ಇಲ್ಲಿಗೆ ಬರಲಿಲ್ಲ. ನೊಂದ ಜನರಿಗೆ ಸಾಂತ್ವನ ಹೇಳಲಿಲ್ಲ. ಆದರೆ, ಈಗ ಅವರಿಗೆ ಕರ್ನಾಟಕದ ನೆನಪಾಗಿದೆ ಎಂದು ಪ್ರಧಾನಿ ಮೋದಿ ರಾಜ್ಯ ಪ್ರವಾಸದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವ್ಯಂಗ್ಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಕೊರೋನಾ ವೇಳೆ ಮೋದಿ ರಾಜ್ಯದ ಜನರಿಗೆ ಆಕ್ಸಿಜನ್ ಕೊಟ್ಟಿದ್ದಾರಾ? ಹೈಕೋರ್ಟ್ ಹೇಳಿದರೂ ಆಕ್ಸಿಜನ್ ಕೊಟ್ಟಿರಲಿಲ್ಲ. ಸುಪ್ರೀಂಕೋರ್ಟ್ ಚಾಟಿಬೀಸಿದ ಮೇಲೆ ಕೊಟ್ಟರು. ಆಕ್ಸಿಜನ್ ಇಲ್ಲದೆ ಸಾವಿರಾರು ಜನ ಸತ್ತರು. ಚಾಮರಾಜನಗರದಲ್ಲಿ 36 ಜನ ಸಾವನ್ನಪ್ಪಿದರು.ರಾಜ್ಯದ ಬೇರೆಡೆಯೂ ಆಕ್ಸಿಜನ್ ಇಲ್ಲದೆ ಸತ್ತರು .ಇದಕ್ಕೆಲ್ಲ ಯಾರು ಕಾರಣ ? ಇದೇ ಮೋದಿಯವರು ಎಂದು ಆರೋಪಿಸಿದ್ದಾರೆ.

ತೆರಿಗೆ ಪಾಲು ರಾಜ್ಯಕ್ಕೆ ಕಡಿಮೆಯಾಗುತ್ತಿದೆ. ರಾಜ್ಯವೊಂದೇ 19 ಲಕ್ಷ ಕೋಟಿ ಹಣವನ್ನು ಕೊಟ್ಟಿದೆ.ತೆರಿಗೆ ಮೂಲಕ ಕಲೆಕ್ಟ್ ಮಾಡಿದ ಹಣ ನೀಡಿದೆ. ನಮಗೆ 45 ಸಾವಿರ ಕೋಟಿ ರೂ. ತೆರಿಗೆ ಬಾಕಿ ಬರಬೇಕು. ಆದರೆ ಬಂದಿಲ್ಲ. ಕೇಂದ್ರ ಹಣಕಾಸು ಸಚಿವರು ನಮ್ಮ ರಾಜ್ಯದವರೇ. 15 ಪೇ ಕಮಿಷನ್ ಹಣ ವನ್ನೂ ನೀಡಲಿಲ್ಲ. ರಾಜ್ಯಕ್ಕೆ ಬರುವ ಶೇ 1.07 ಹಣ ಕಡಿಮೆಯಾಯಿತು ಎಂದು ಆಪಾದಿಸಿದ್ದಾರೆ.

ಆಕ್ಸಿಜನ್ ಕೊಡುವುದಕ್ಕೆ ಆಗದವರು ಈಗ ಯೋಗ ಮಾಡುವುದಕ್ಕೆ ಬಂದಿದ್ದಾರೆ.ಆಕ್ಸಿಜನ್ ಬಗ್ಗೆ ಪ್ರಧಾನಿಯವರು ಹೇಳಬೇಕು.40 % ಕಮಿಷನ್ ಬಗ್ಗೆ ದೂರು ಕೊಟ್ಟರು ಯಾಕೆ‌ ಚೌಕಿದಾರ್ ಇಲ್ಲಿಯವರೆಗೆ ಉತ್ತರ ಕೊಟ್ಟಿಲ್ಲ ?ಸಬರ್ಬನ್ ಯೋಜನೆ ಹೇಳುತ್ತಲೇ ಬರುತ್ತಿದ್ದಾರೆ. ಅನಂತ್ ಕುಮಾರ್ ಕಾಲದಿಂದ ಹೇಳುತ್ತಿದ್ದಾರೆ.

ಆದರೆ, ಯೋಜನೆ ಮಾತ್ರ ಏನೂ ಆಗಿಲ್ಲ. ಮೋದಿಯವರಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಅವರ ಸರ್ಕಾರ ಕರ್ನಾಟಕದಲ್ಲಿದ್ದು, ಲೂಟಿ ಹೊಡೆಯುತ್ತಿದೆ. ಭ್ರಷ್ಟಾಚಾರ ಹೆಚ್ಚಾಗುತ್ತಿದೆ.ಇದಕ್ಕೆಲ್ಲ ಪ್ರಧಾನಿಯವರು ಅನುಮತಿ ಕೊಟ್ಟಿದ್ದಾರಾ? ಈ ನಮ್ಮ ಪ್ರಶ್ನೆಗೆ ಅವರು ಉತ್ತರ ಕೊಡಲಿ ಎಂದು ಸವಾಲು ಹಾಕಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...