Thursday, October 3, 2024
Thursday, October 3, 2024

ರಾಷ್ಟ್ರಪತಿ ಚುನಾವಣೆ: ಯಶವಂತ ಸಿನ್ಹಾ ಅಭ್ಯರ್ಥಿ?

Date:

ಪ್ರಸ್ತುತ ತೃಣಮೂಲ ಕಾಂಗ್ರೆಸ್‌ ಸಹ ಅಧ್ಯಕ್ಷರಾಗಿರುವ ಯಶವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಪಕ್ಷದಿಂದ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಕೆಲವು ಪಕ್ಷಗಳ ನಾಯಕರು ನೀಡಿದ ಸಲಹೆ ಮೇರೆಗೆ ಸಿನ್ಹಾ ಅವರನ್ನು ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಪಕ್ಷದ ನಾಯಕ ಹೇಳಿದ್ದಾರೆ.

ಕಳೆದ ವರ್ಷ ಟಿಎಂಸಿಗೆ ಸೇರ್ಪಡೆಗೊಂಡ ಬಿಜೆಪಿಯ ಮಾಜಿ ನಾಯಕನ ಹೆಸರನ್ನು ಒಂದೆರಡು ವಿರೋಧ ಪಕ್ಷಗಳು ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿಯಾಗಿ ಪ್ರಸ್ತಾಪಿಸಿವೆ. ಮತ್ತು ಬೆಂಬಲಿಸಿವೆ ಎಂದು ಹೇಳಲಾಗಿದೆ.

ಈ ಮೊದಲು, ಎನ್‌.ಸಿ.ಪಿ. ಮುಖ್ಯಸ್ಥ ಶರದ್ ಪವಾರ್, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಮತ್ತು ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಗೋಪಾಲ್ ಕೃಷ್ಣ ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಆದರೆ, ಈ ಮೂವರೂ ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಲು ನಿರಾಕರಿಸಿದರು.

ಸಿನ್ಹಾ ಈಗ ಟಿಎಂಸಿ ನಾಯಕರಾಗಿದ್ದು, ಮೂರ್ನಾಲ್ಕು ಪಕ್ಷಗಳು ಅವರ ಹೆಸರು ಪ್ರಸ್ತಾಪಿಸಿವೆ ಎಂದು ಹಿರಿಯ ಟಿಎಂಸಿ ನಾಯಕ ಹೇಳಿದ್ದಾರೆ.

ವಿರೋಧ ಪಕ್ಷಗಳ ನಾಯಕರ ಈ ಸಭೆಯಲ್ಲಿ ಸಿನ್ಹಾ ಅವರ ಹೆಸರನ್ನು ಪರಿಶೀಲಿಸಲಾಗುವುದು. ಮಮತಾ ಬ್ಯಾನರ್ಜಿ ಕಳೆದ ವಾರ 22 ಬಿಜೆಪಿಯೇತರ ಪಕ್ಷಗಳ ಸಮಾವೇಶವನ್ನು ಆಯೋಜಿಸಿದ್ದರು. ಅದರಲ್ಲಿ 17 ಮಂದಿ ಭಾಗವಹಿಸಿದ್ದರು.
ಸಿನ್ಹಾ ಅವರು ಎರಡು ಬಾರಿ ಕೇಂದ್ರ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಒಮ್ಮೆ ಚಂದ್ರಶೇಖರ್ ಸಂಪುಟದಲ್ಲಿ ಮತ್ತು ಮತ್ತೊಮ್ಮೆ ವಾಜಪೇಯಿ ಮಂತ್ರಿಮಂಡಲದಲ್ಲಿ ಹಣಕಾಸು ಸಚಿವರಾಗಿದ್ದರು. ವಾಜಪೇಯಿ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಷ್ಟ್ರಪತಿ ಚುನಾವಣೆಗೆ ಜುಲೈ 18 ರಂದು ಮತದಾನ ಆರಂಭವಾಗಲಿದ್ದು, ಜುಲೈ 21 ರಂದು ಫಲಿತಾಂಶ ಪ್ರಕಟವಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...