Thursday, June 12, 2025
Thursday, June 12, 2025

ಅಗ್ನಿವೀರರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಟಾಟಾ ಸನ್ಸ್ ಅಧ್ಯಕ್ಷ

Date:

ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ ಅವರು ಕೇಂದ್ರದ ಅಗ್ನಿಪಥ್ ಯೋಜನೆಯನ್ನು ಬೆಂಬಲಿಸಿದೆ. ಇದು ಯುವಜನರಿಗೆ ರಕ್ಷಣಾ ಪಡೆಗಳಲ್ಲಿ ಸೇವೆ ಸಲ್ಲಿಸುವ ಅವಕಾಶದ ಜೊತೆಗೆ, ಉದ್ಯಮಕ್ಕೆ ಅತ್ಯಂತ ಶಿಸ್ತುಬದ್ಧ ಮತ್ತು ತರಬೇತಿ ಪಡೆದ ಉದ್ಯೋಗಿಗಳನ್ನು ಲಭ್ಯವಾಗುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ.

ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ, ಆರ್‌ಪಿಜಿ ಎಂಟರ್‌ಪ್ರೈಸಸ್ ಅಧ್ಯಕ್ಷ ಹರ್ಷ್ ಗೋಯೆಂಕಾ, ಬಯೋಕಾನ್ ಲಿಮಿಟೆಡ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಮತ್ತು ಅಪೊಲೊ ಹಾಸ್ಪಿಟಲ್ಸ್ ಗ್ರೂಪ್ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸಂಗೀತಾ ರೆಡ್ಡಿ ಸಹ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಗ್ನಿಪಥ್ ಯುವಜನರಿಗೆ ರಾಷ್ಟ್ರದ ರಕ್ಷಣಾ ಪಡೆಗಳಿಗೆ ಸೇವೆ ಸಲ್ಲಿಸಲು ಶ್ರೇಷ್ಠ ಅವಕಾಶ ಮಾತ್ರವಲ್ಲದೇ, ಇದು ಟಾಟಾ ಗ್ರೂಪ್ ಸೇರಿದಂತೆ ಹಲವು ಉದ್ಯಮಕ್ಕೆ ಅತ್ಯಂತ ಶಿಸ್ತು ಹಾಗೂ ತರಬೇತಿ ಪಡೆದ ಯುವಕರನ್ನು ಲಭ್ಯವಾಗುವಂತೆ ಮಾಡುತ್ತದೆ ಎಂದು ಎನ್. ಚಂದ್ರಶೇಖರನ್‌ ಅವರು ತಿಳಿಸಿದ್ದಾರೆ.

ನಾವು ಟಾಟಾ ಸಮೂಹದಲ್ಲಿ ಅಗ್ನಿವೀರರ ಸಾಮರ್ಥ್ಯವನ್ನು ಗುರುತಿಸುತ್ತೇವೆ. ಹಾಗೂ ಇದು ಪ್ರತಿನಿಧಿಸುವ ಅವಕಾಶವನ್ನು ನಾವು ಸ್ವಾಗತಿಸುತ್ತೇವೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಇಂದು ಅಗ್ನಿಪಥ್​ ಯೋಜನೆಯ ವಿರುದ್ಧದ ಪ್ರತಿಭಟನೆಯಿಂದಾಗಿ 500ಕ್ಕೂ ರೈಲುಗಳನ್ನು ರದ್ದುಗೊಳಿಸಲಾಗಿದೆ. ಪ್ರತಿಪಕ್ಷಗಳು ಹಾಗೂ ಮಿಲಿಟರಿ ತಜ್ಞರು ಅಲ್ಪಾವಧಿಯ ಈ ನೇಮಕಾತಿ ಯೋಜನೆಯನ್ನು ಟೀಕಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...