Thursday, February 13, 2025
Thursday, February 13, 2025

ಬೆಂಗಳೂರು ಶಾಲೆಗಳಲ್ಲಿ ಕೋವಿಡ್ ಮಾರ್ಗಸೂಚಿ ಜಾರಿಗೆ

Date:

ರಾಜಧಾನಿಯ ಹಲವು ಶಾಲೆಗಳಲ್ಲಿ ಕೊರೊನಾ ಸೋಂಕು ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆ, ರಾಜ್ಯದಲ್ಲಿ ಮೇ.15ರಿಂದ ಶಾಲೆಗಳನ್ನು ಪ್ರಾರಂಭಿಸಲಾಗಿದೆ.
ಒಂದು ವೇಳೆ ಕೋವಿಡ್ ಪ್ರತಿಕೂಲ ಸನ್ನಿವೇಶ ಉಂಟಾದರೆ, ಶೈಕ್ಷಣಿಕ ಚಟುವಟಿಕೆಗಳನ್ನು ಪರ್ಯಾಯ ಮಾರ್ಗದ ಮೂಲಕ ಮುಂದುವರೆಸಬೇಕು. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯದಂತೆ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ನಗರದ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಲ್ಲಿಕೊರೊನಾ ಸೋಂಕು ಹರಡದಂತೆ ಶಾಲಾ ಆಡಳಿತ ಮಂಡಳಿಗಳು ಕ್ರಮ ವಹಿಸಬೇಕು. ಈಗಾಗಲೇ ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಬಿಡುಗಡೆ ಮಾಡಿರುವ ಎಸ್‌ಓಪಿ (ಮಾರ್ಗಸೂಚಿ)ಗಳನ್ನು ಶಾಲಾ ಆಡಳಿತ ಮಂಡಳಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಲಾಗಿದೆ.

ಕೋವಿಡ್ ದೃಢಪಟ್ಟ ಮಕ್ಕಳಿಗೆ ತಾತ್ಕಾಲಿಕವಾಗಿ ಶಾಲೆಗೆ ಹಾಜರಾಗದಂತೆ ರಜೆ ನೀಡಬೇಕು

ಶಾಲಾ ಕಟ್ಟಡಕ್ಕೆ ಮತ್ತು ಕೊಠಡಿಗಳಿಗೆ ಸ್ಯಾನಿಟೈಸ್ ಮಾಡುವುದು.

ರಜಾ ದಿನಗಳಲ್ಲಿನ ಪಾಠ ಪ್ರವಚನ ಮುಂದಿನ ಸರ್ಕಾರಿ ರಜಾ ದಿನಗಳಲ್ಲಿ ಸರಿ ದೂಗಿಸಬೇಕು.

ಶಿಕ್ಷಕರು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು

50 ವರ್ಷ ಮೇಲ್ಪಟ್ಟ ಶಿಕ್ಷಕರು ಮತ್ತು ಸಿಬ್ಬಂದಿ ಪೂರ್ವಭಾವಿಯಾಗಿ ಆರೋಗ್ಯ ತಪಾಸಣೆಗೆ ಒಳಪಡಬೇಕು.
ಅನಾರೋಗ್ಯ ಪೀಡಿತರು ಸುರಕ್ಷತಾ ಕ್ರಮ ಕೈಗೊಳ್ಳಬೇಕು.

ಶಾಲೆಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮ ಕುರಿತು ವಿದ್ಯಾರ್ಥಿಗಳ ಪೋಷಕರಿಗೆ ತಿಳಿಸಬೇಕು.

ಪ್ರತಿ ದಿನ ಮಕ್ಕಳಿಗೆ ಶಾಲೆಗಳಲ್ಲಿ ಅರಿವು ಮೂಡಿಸಬೇಕು.
ಶಾಲೆಗಳಲ್ಲಿ ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.

ಮನೆಯಿಂದಲೇ ಅಗತ್ಯ ಬಿಸಿ ನೀರನ್ನು ಮಕ್ಕಳು ತರಬೇಕು
12 ರಿಂದ 14 ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿರುವ ಬಗ್ಗೆ ಪರಿಶೀಲನೆ ನಡೆಸಬೇಕು
ಲಸಿಕೆ ಪಡೆಯದ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು.

ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಬಂದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪೋಷಕರ ಉಪಸ್ಥಿತಿಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rapido Bike ಶಿವಮೊಗ್ಗಕ್ಕೂ ಎಂಟ್ರಿ ಕೊಟ್ಟ ರ್ಯಾಪಿಡೊ ಬೈಕ್

Rapido Bike ಶಿವಮೊಗ್ಗ ನಗರದಲ್ಲಿ ರ್ಯಾಪಿಡೋ ಬೈಕ್ ಓಡಾಟ ಶುರುವಾಗಿದೆ.ರ್ಯಾಪಿಡೋ...

MESCOM ಫೆ.14. ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರದ ಆಲ್ಕೋಳ ವಿ.ವಿ.ಕೇಂದ್ರದಿಂದ ತುರ್ತು ಕಾಮಗಾರಿ ಇರುವುದರಿಂದ ಫೆ.14...

Shri Sewalal Jayanti ಶ್ರೀ ಸೇವಾಲಾಲ್ ಜಯಂತಿಗೆ ಸರ್ವ ಸಿದ್ಧತೆ

Shri Sewalal Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ,...

MESCOM ಫೆ.15. ಮಾಚೇನಹಳ್ಳಿ‌‌ ಸುತ್ತಮುತ್ತ ವಿದ್ಯುತ್ಸರಬರಾಜು ವ್ಯತ್ಯಯ

MESCOM ಫೆ. 15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6...