Saturday, June 21, 2025
Saturday, June 21, 2025

ಪಾರಂಪರಿಕ ಹಿನ್ನೆಲೆಯ ಸಾಗರ, ಭದ್ರಾವತಿ & ತೀರ್ಥಹಳ್ಳಿಯಲ್ಲಿ ಯೋಗದಿನಾಚರಣೆ

Date:

ಭಾರತ ಮತ್ತು ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಕಚೇರಿ, ವಿವಿಧ ಯೋಗ ಸಂಸ್ಥೆಗಳು, ಎನ್‍ಎಸ್‍ಎಸ್ ಮತ್ತು ಎನ್‍ಸಿಸಿ ಘಟಕಗಳ ಸಹಯೋಗದಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಪಾರಂಪರಿತ ತಾಣಗಳಾದ ಸಾಗರ ತಾಲ್ಲೂಕಿನ ಶ್ರೀ ಅಘೋರೇಶ್ವರ ದೇವಸ್ಥಾನ ಆವರಣ ಇಕ್ಕೇರಿ, ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಆವರಣ ಭದ್ರಾವತಿ ಮತ್ತು ಕ್ಕೆ ಶ್ರೀ ರಾಮೇಶ್ವರ ದೇವಸ್ಥಾನ ಆವರಣ ತೀರ್ಥಹಳ್ಳಿ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಸಲಾಯಿತು.

ಸಾಗರ ತಾಲ್ಲೂಕಿನ ಇಕ್ಕೇರಿಯ ಶ್ರೀ ಅಘೋರೇಶ್ವರ ದೇವಸ್ಥಾನ ಆವರಣದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯನ್ನು ಶಾಸಕರಾದ ಹರತಾಳು ಉದ್ಘಾಟಿಸಿ, ಯೋಗಾಭ್ಯಾಸದಲ್ಲಿ ಪಾಲ್ಗೊಂಡರು. ನಂತರ ಮಾತನಾಡಿ, ಇಡೀ ವಿಶ್ವಕ್ಕೆ ಯೋಗ ಪರಿಚಯಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ನಮ್ಮ ದೇಶದಲ್ಲಿ ರೈತರು ಮತ್ತು ಸೈನಿಕರು ನಿಜವಾದ ಯೋಗಿಗಳಾಗಿದ್ದು ಪ್ರತಿಯೊಬ್ಬರು ಪ್ರತಿನಿತ್ಯ ಯೋಗಾಭ್ಯಾಸ ಮಾಡಬೇಕು. ಇದರಿಂದ ಮನಸ್ಸು ಮತ್ತು ದೇಹಾರೋಗ್ಯ ಹೆಚ್ಚುತ್ತದೆ ಎಂದರು.

ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಆವರಣ ಭದ್ರಾವತಿ ಇಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯನ್ನು ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್ ಉದ್ಘಾಟಿಸಿದರು. ಜಿ.ಪಂ ಸಿಇಓ ಎಂ.ಎಲ್.ವೈಶಾಲಿ ಮಾತನಾಡಿ, ಯೋಗಾಭ್ಯಾಸದ ಪ್ರಾಮುಖ್ಯತೆಯನ್ನು ಎಲ್ಲರೂ ತಿಳಿದುಕೊಂಡು ಪ್ರತಿ ಮನೆ ಮನೆಗಳಲ್ಲಿ ಯೋಗಾಭ್ಯಾಸ ಮಾಡಬೇಕೆಂದರು.

ಶ್ರೀ ರಾಮೇಶ್ವರ ದೇವಸ್ಥಾನ ಆವರಣ, ತೀರ್ಥಹಳ್ಳಿ ಇಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯನ್ನು
ಪ್ರಭಾರ ತಹಶೀಲ್ದಾರ್ ಮಂಜುಳ ಭಜಂತ್ರಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಯೋಗ ಅತ್ಯಂತ ಅವಶ್ಯಕವಾಗಿದ್ದು, ಮಾನಸಿಕ ಸಮಯೋಲನ ಕಾಪಾಡಲು ಹಾಗೂ ದುಶ್ಚಟಗಳಿಂದ ದೂರವಿರಲು ಇದು ಸಹಕಾರಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Charaka and Desi Trust ಸಾಂಪ್ರದಾಯಿಕ ನೇಕಾರಿಕೆಗೆ ಸರ್ಕಾರದ ಉತ್ತೇಜನ: ಸಚಿವ ಶಿವಾನಂದ ಪಾಟೀಲ

Charaka and Desi Trust ಸ್ಪರ್ಧಾತ್ಮಕ ಮತ್ತು ತಂತ್ರಜ್ಞಾನ ಯುಗದಲ್ಲಿ ಪಾರಂಪರಿಕ...

Malenadu Development Foundation ಸಾಧಿಸುವ ಧೈರ್ಯದೊಂದಿಗೆ ವಿದ್ಯಾರ್ಥಿಗಳು ಜೀವನೋತ್ಸಾಹ ಬೆಳೆಸಿಕೊಳ್ಳಬೇಕು- ಡಾ.ಗುರುರಾಜ ಕರ್ಜಗಿ

Malenadu Development Foundation ಸಾಧಿಸುವ ಛಲ, ಧೈರ್ಯದೊಂದಿಗೆ ವಿದ್ಯಾರ್ಥಿಗಳು ಜೀವನೋತ್ಸಾಹ ಬೆಳೆಸಿಕೊಳ್ಳಬೇಕು...

MESCOM ಜೂ.23 ರಂದು ಕುಂಸಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ...