Tuesday, April 21, 2026
Tuesday, April 21, 2026

ಸ್ತ್ರೀ ಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅ.2ರಂದು ಚಾಲನೆ

Date:

ಸಮಾನತೆ ದುಡಿಮೆಯ ಕ್ರಾಂತಿ ಮಾಡುತ್ತಿರುವ ಸ್ತ್ರೀಶಕ್ತಿ ಸಂಘ ಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಗೆ ಅಕ್ಟೋಬರ್ 2ರಂದು ಚಾಲನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಂಗಳೂರಿನ ಗಾಂಧಿ ಭವನದಲ್ಲಿ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಗಾಂಧಿ ಸ್ಮಾರಕ ನಿಧಿ ಹಾಗೂ ಸುಮಂಗಲಿ ಸೇವಾ ಆಶ್ರಮ ಸಹಯೋಗದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸ್ವಯಂ ಸೇವಾ ಸಂಸ್ಥೆಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಸೇವಾ ಸಂಸ್ಥೆಗಳು ಸಮಾನತೆಯ ಕ್ರಾಂತಿ ತರುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ರಾಜ್ಯವನ್ನು ಸುಭೀಕ್ಷವಾಗಿಸಲು ಶ್ರಮಿಸುತ್ತಿವೆ. ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶದ ಸ್ತ್ರೀಶಕ್ತಿಯ ಸಬಲೀಕರಣ ಆಗಬೇಕು. ಸ್ಥಳೀಯ ಸಂಘಸಂಸ್ಥೆಗಳ ಉತ್ಪನ್ನಗಳು ವಿದೇಶದಲ್ಲಿ ಮಾರಾಟ ವಾಗಬೇಕು. ಆಗ ನಮ್ಮ ಆರ್ಥಿಕತೆಗೆ ಶಕ್ತಿ ಬರುತ್ತದೆ. ಈ ದೇಶದಲ್ಲಿ ಮಹಿಳೆಯರ ದುಡಿಮೆಗೆ ಬೆಲೆ ಕೊಡಬೇಕು. ಅವರಲ್ಲಿ ಆರ್ಥಿಕ ಸ್ವಾತಂತ್ರ್ಯ ಬಂದರೆ ಉಳಿದಂತೆ ಶೈಕ್ಷಣಿಕ, ಸಾಮಾಜಿಕ ಸೇರಿ ಎಲ್ಲ ವಲಯಗಳಲ್ಲೂ ಸ್ತ್ರೀಯರು ಸಬಲರಾಗುತ್ತಾರೆ ಎಂದರು.

ಸ್ತ್ರೀಶಕ್ತಿ ಸಂಘಗಳು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಲು ಅನುಕೂಲವಾಗುವಂತೆ ಆಯವ್ಯಯದಲ್ಲಿ ಮೊದಲ ಬಾರಿಗೆ 1.5 ಲಕ್ಷ ಆರ್ಥಿಕ ನೆರವು ಒದಗಿಸಲಾಗಿದೆ. ಜತೆಗೆ ಆಂಕರ್ ಬ್ಯಾಂಕ್ ಜೋಡಣೆ, ಯಂತ್ರೋಪಕರಣ, ಪ್ರಾಜೆಕ್ಟ್​ಗಳು, ಉತ್ಪನ್ನಗಳಿಗೆ ಮಾರುಕಟ್ಟೆಗಳಲ್ಲಿ ಹಾಗೂ ಅಮೆಜಾನ್​ನಂತಹ ಆನ್​ಲೈನ್ ವೇದಿಕೆಗಳಲ್ಲಿ ಮಾರಾಟದ ವ್ಯವಸ್ಥೆ ಕಲ್ಪಿಸಲಾಗುವುದು. ಈ ಸಂಬಂಧ ಪ್ರಾರಂಭಿಸಿರುವ ಪ್ರಾಯೋಗಿಕವಾಗಿ ಎಲಿವೇಟ್ ಕಾರ್ಯಕ್ರಮದಲ್ಲಿ ಒಂದು ಸ್ತ್ರೀಶಕ್ತಿ ಸಂಘ ತಿಂಗಳಿಗೆ ಸುಮಾರು 50 ಲಕ್ಷ ರೂ. ವಹಿವಾಟು ಮಾಡುತ್ತಿದೆ. ಇದು ಸಂಘಟಿತ ಶ್ರಮದ ಶಕ್ತಿ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕ್ರಾಂತಿಕಾರಿ ಬಸವಣ್ಣನವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡೋಣ- ಬಿ.ವೈ.ರಾಘವೇಂದ್ರ

B.Y. Raghavendra ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ...

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...