Wednesday, March 25, 2026
Wednesday, March 25, 2026

ಬೊಕ್ಕಸಕ್ಕೆ ಭಾರವಾಗಿರುವ ನಿಗಮಗಳ ವಿಲೀನ

Date:

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ತನ್ನ ಬೊಕ್ಕಸಕ್ಕೆ ಭಾರವಾಗಿರುವ ನಿಗಮಗಳನ್ನು ವಿಲೀನಗೊಳಿಸಲು ತೀರ್ಮಾನಿಸಿದೆ.

ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡ ಕಂದಾಯ ಸಚಿವ ಆರ್. ಅಶೋಕ್ ಅವರು

ಒಂದೊಂದು ಇಲಾಖೆಯಲ್ಲಿ ನಾಲ್ಕೈದು ನಿಗಮಗಳಿದ್ದು, ಬಹುತೇಕ ನಿಗಮಗಳಿಗೆ ಮಾಡಲು ಕೆಲಸವೇ ಇಲ್ಲ. ಇಂತಹ ನಿಗಮಗಳಿಗೆ ಹಲವು ಸಿಬ್ಬಂದಿ, ಅಧಿಕಾರಿಗಳಿದ್ದು, ವಿನಾಕಾರಣ ಕಾರುಗಳು ಬಳಕೆಯಾಗುತ್ತಿವೆ. ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಹಣ್ಣಿನ ರಸ ತೆಗೆಯಲು, ರಬ್ಬರ್ ರಸ ತೆಗೆಯಲು ಸಹ ನಿಗಮಗಳಿವೆ. ಇಂತಹ ನಿಗಮಗಳಿಂದ ಸರ್ಕಾರದ ಬೊಕ್ಕಸಕ್ಕೆ ಅನಗತ್ಯ ಭಾರ. ಈ ಭಾರವನ್ನು ಕಡಿಮೆ ಮಾಡಿಕೊಳ್ಳುವುದು ಅನಿವಾರ್ಯ ಎಂದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಲವು ನಿಗಮಗಳಿದ್ದರೂ, ಅಲ್ಲಿ ಬಹಳ ಕೆಲಸಗಳಿವೆ. ಹೀಗಾಗಿ ಸಮಾಜ ಕಲ್ಯಾಣ ಇಲಾಖೆಯಂತಹ ಪ್ರಮುಖ ಇಲಾಖೆಗಳಲ್ಲಿರುವ ನಿಗಮಗಳನ್ನು ಮುಟ್ಟಲು ಹೋಗುವುದಿಲ್ಲ. ಆದರೆ ಸರ್ಕಾರದ ಬಹುತೇಕ ಇಲಾಖೆಗಳಲ್ಲಿ ಒಂದು ನಿಗಮದ ಜಾಗದಲ್ಲಿ ಹಲವು ನಿಗಮಗಳಿದ್ದು, ಇವನ್ನು ವಿಲೀನಗೊಳಿಸಿ ಆಯಾ ಇಲಾಖೆಯಲ್ಲಿ ಒಂದೇ ನಿಗಮವಿರುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...