Tuesday, December 16, 2025
Tuesday, December 16, 2025

ಬೊಕ್ಕಸಕ್ಕೆ ಭಾರವಾಗಿರುವ ನಿಗಮಗಳ ವಿಲೀನ

Date:

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ತನ್ನ ಬೊಕ್ಕಸಕ್ಕೆ ಭಾರವಾಗಿರುವ ನಿಗಮಗಳನ್ನು ವಿಲೀನಗೊಳಿಸಲು ತೀರ್ಮಾನಿಸಿದೆ.

ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡ ಕಂದಾಯ ಸಚಿವ ಆರ್. ಅಶೋಕ್ ಅವರು

ಒಂದೊಂದು ಇಲಾಖೆಯಲ್ಲಿ ನಾಲ್ಕೈದು ನಿಗಮಗಳಿದ್ದು, ಬಹುತೇಕ ನಿಗಮಗಳಿಗೆ ಮಾಡಲು ಕೆಲಸವೇ ಇಲ್ಲ. ಇಂತಹ ನಿಗಮಗಳಿಗೆ ಹಲವು ಸಿಬ್ಬಂದಿ, ಅಧಿಕಾರಿಗಳಿದ್ದು, ವಿನಾಕಾರಣ ಕಾರುಗಳು ಬಳಕೆಯಾಗುತ್ತಿವೆ. ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಹಣ್ಣಿನ ರಸ ತೆಗೆಯಲು, ರಬ್ಬರ್ ರಸ ತೆಗೆಯಲು ಸಹ ನಿಗಮಗಳಿವೆ. ಇಂತಹ ನಿಗಮಗಳಿಂದ ಸರ್ಕಾರದ ಬೊಕ್ಕಸಕ್ಕೆ ಅನಗತ್ಯ ಭಾರ. ಈ ಭಾರವನ್ನು ಕಡಿಮೆ ಮಾಡಿಕೊಳ್ಳುವುದು ಅನಿವಾರ್ಯ ಎಂದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಲವು ನಿಗಮಗಳಿದ್ದರೂ, ಅಲ್ಲಿ ಬಹಳ ಕೆಲಸಗಳಿವೆ. ಹೀಗಾಗಿ ಸಮಾಜ ಕಲ್ಯಾಣ ಇಲಾಖೆಯಂತಹ ಪ್ರಮುಖ ಇಲಾಖೆಗಳಲ್ಲಿರುವ ನಿಗಮಗಳನ್ನು ಮುಟ್ಟಲು ಹೋಗುವುದಿಲ್ಲ. ಆದರೆ ಸರ್ಕಾರದ ಬಹುತೇಕ ಇಲಾಖೆಗಳಲ್ಲಿ ಒಂದು ನಿಗಮದ ಜಾಗದಲ್ಲಿ ಹಲವು ನಿಗಮಗಳಿದ್ದು, ಇವನ್ನು ವಿಲೀನಗೊಳಿಸಿ ಆಯಾ ಇಲಾಖೆಯಲ್ಲಿ ಒಂದೇ ನಿಗಮವಿರುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...