Thursday, July 9, 2026
Thursday, July 9, 2026

ಬೊಕ್ಕಸಕ್ಕೆ ಭಾರವಾಗಿರುವ ನಿಗಮಗಳ ವಿಲೀನ

Date:

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ತನ್ನ ಬೊಕ್ಕಸಕ್ಕೆ ಭಾರವಾಗಿರುವ ನಿಗಮಗಳನ್ನು ವಿಲೀನಗೊಳಿಸಲು ತೀರ್ಮಾನಿಸಿದೆ.

ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡ ಕಂದಾಯ ಸಚಿವ ಆರ್. ಅಶೋಕ್ ಅವರು

ಒಂದೊಂದು ಇಲಾಖೆಯಲ್ಲಿ ನಾಲ್ಕೈದು ನಿಗಮಗಳಿದ್ದು, ಬಹುತೇಕ ನಿಗಮಗಳಿಗೆ ಮಾಡಲು ಕೆಲಸವೇ ಇಲ್ಲ. ಇಂತಹ ನಿಗಮಗಳಿಗೆ ಹಲವು ಸಿಬ್ಬಂದಿ, ಅಧಿಕಾರಿಗಳಿದ್ದು, ವಿನಾಕಾರಣ ಕಾರುಗಳು ಬಳಕೆಯಾಗುತ್ತಿವೆ. ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಹಣ್ಣಿನ ರಸ ತೆಗೆಯಲು, ರಬ್ಬರ್ ರಸ ತೆಗೆಯಲು ಸಹ ನಿಗಮಗಳಿವೆ. ಇಂತಹ ನಿಗಮಗಳಿಂದ ಸರ್ಕಾರದ ಬೊಕ್ಕಸಕ್ಕೆ ಅನಗತ್ಯ ಭಾರ. ಈ ಭಾರವನ್ನು ಕಡಿಮೆ ಮಾಡಿಕೊಳ್ಳುವುದು ಅನಿವಾರ್ಯ ಎಂದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಲವು ನಿಗಮಗಳಿದ್ದರೂ, ಅಲ್ಲಿ ಬಹಳ ಕೆಲಸಗಳಿವೆ. ಹೀಗಾಗಿ ಸಮಾಜ ಕಲ್ಯಾಣ ಇಲಾಖೆಯಂತಹ ಪ್ರಮುಖ ಇಲಾಖೆಗಳಲ್ಲಿರುವ ನಿಗಮಗಳನ್ನು ಮುಟ್ಟಲು ಹೋಗುವುದಿಲ್ಲ. ಆದರೆ ಸರ್ಕಾರದ ಬಹುತೇಕ ಇಲಾಖೆಗಳಲ್ಲಿ ಒಂದು ನಿಗಮದ ಜಾಗದಲ್ಲಿ ಹಲವು ನಿಗಮಗಳಿದ್ದು, ಇವನ್ನು ವಿಲೀನಗೊಳಿಸಿ ಆಯಾ ಇಲಾಖೆಯಲ್ಲಿ ಒಂದೇ ನಿಗಮವಿರುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ...

Friends Center Organization ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪ್ರಸಿದ್ಧಿ ಪಡೆದಿದೆ- ಎಸ್.ಎನ್.ಚನ್ನಬಸಪ್ಪ

Friends Center Organization ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು...

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....