Sunday, June 22, 2025
Sunday, June 22, 2025

ಬೊಕ್ಕಸಕ್ಕೆ ಭಾರವಾಗಿರುವ ನಿಗಮಗಳ ವಿಲೀನ

Date:

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ತನ್ನ ಬೊಕ್ಕಸಕ್ಕೆ ಭಾರವಾಗಿರುವ ನಿಗಮಗಳನ್ನು ವಿಲೀನಗೊಳಿಸಲು ತೀರ್ಮಾನಿಸಿದೆ.

ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡ ಕಂದಾಯ ಸಚಿವ ಆರ್. ಅಶೋಕ್ ಅವರು

ಒಂದೊಂದು ಇಲಾಖೆಯಲ್ಲಿ ನಾಲ್ಕೈದು ನಿಗಮಗಳಿದ್ದು, ಬಹುತೇಕ ನಿಗಮಗಳಿಗೆ ಮಾಡಲು ಕೆಲಸವೇ ಇಲ್ಲ. ಇಂತಹ ನಿಗಮಗಳಿಗೆ ಹಲವು ಸಿಬ್ಬಂದಿ, ಅಧಿಕಾರಿಗಳಿದ್ದು, ವಿನಾಕಾರಣ ಕಾರುಗಳು ಬಳಕೆಯಾಗುತ್ತಿವೆ. ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಹಣ್ಣಿನ ರಸ ತೆಗೆಯಲು, ರಬ್ಬರ್ ರಸ ತೆಗೆಯಲು ಸಹ ನಿಗಮಗಳಿವೆ. ಇಂತಹ ನಿಗಮಗಳಿಂದ ಸರ್ಕಾರದ ಬೊಕ್ಕಸಕ್ಕೆ ಅನಗತ್ಯ ಭಾರ. ಈ ಭಾರವನ್ನು ಕಡಿಮೆ ಮಾಡಿಕೊಳ್ಳುವುದು ಅನಿವಾರ್ಯ ಎಂದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಲವು ನಿಗಮಗಳಿದ್ದರೂ, ಅಲ್ಲಿ ಬಹಳ ಕೆಲಸಗಳಿವೆ. ಹೀಗಾಗಿ ಸಮಾಜ ಕಲ್ಯಾಣ ಇಲಾಖೆಯಂತಹ ಪ್ರಮುಖ ಇಲಾಖೆಗಳಲ್ಲಿರುವ ನಿಗಮಗಳನ್ನು ಮುಟ್ಟಲು ಹೋಗುವುದಿಲ್ಲ. ಆದರೆ ಸರ್ಕಾರದ ಬಹುತೇಕ ಇಲಾಖೆಗಳಲ್ಲಿ ಒಂದು ನಿಗಮದ ಜಾಗದಲ್ಲಿ ಹಲವು ನಿಗಮಗಳಿದ್ದು, ಇವನ್ನು ವಿಲೀನಗೊಳಿಸಿ ಆಯಾ ಇಲಾಖೆಯಲ್ಲಿ ಒಂದೇ ನಿಗಮವಿರುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...