Sunday, May 17, 2026
Sunday, May 17, 2026

ಬೊಕ್ಕಸಕ್ಕೆ ಭಾರವಾಗಿರುವ ನಿಗಮಗಳ ವಿಲೀನ

Date:

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ತನ್ನ ಬೊಕ್ಕಸಕ್ಕೆ ಭಾರವಾಗಿರುವ ನಿಗಮಗಳನ್ನು ವಿಲೀನಗೊಳಿಸಲು ತೀರ್ಮಾನಿಸಿದೆ.

ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡ ಕಂದಾಯ ಸಚಿವ ಆರ್. ಅಶೋಕ್ ಅವರು

ಒಂದೊಂದು ಇಲಾಖೆಯಲ್ಲಿ ನಾಲ್ಕೈದು ನಿಗಮಗಳಿದ್ದು, ಬಹುತೇಕ ನಿಗಮಗಳಿಗೆ ಮಾಡಲು ಕೆಲಸವೇ ಇಲ್ಲ. ಇಂತಹ ನಿಗಮಗಳಿಗೆ ಹಲವು ಸಿಬ್ಬಂದಿ, ಅಧಿಕಾರಿಗಳಿದ್ದು, ವಿನಾಕಾರಣ ಕಾರುಗಳು ಬಳಕೆಯಾಗುತ್ತಿವೆ. ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಹಣ್ಣಿನ ರಸ ತೆಗೆಯಲು, ರಬ್ಬರ್ ರಸ ತೆಗೆಯಲು ಸಹ ನಿಗಮಗಳಿವೆ. ಇಂತಹ ನಿಗಮಗಳಿಂದ ಸರ್ಕಾರದ ಬೊಕ್ಕಸಕ್ಕೆ ಅನಗತ್ಯ ಭಾರ. ಈ ಭಾರವನ್ನು ಕಡಿಮೆ ಮಾಡಿಕೊಳ್ಳುವುದು ಅನಿವಾರ್ಯ ಎಂದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಲವು ನಿಗಮಗಳಿದ್ದರೂ, ಅಲ್ಲಿ ಬಹಳ ಕೆಲಸಗಳಿವೆ. ಹೀಗಾಗಿ ಸಮಾಜ ಕಲ್ಯಾಣ ಇಲಾಖೆಯಂತಹ ಪ್ರಮುಖ ಇಲಾಖೆಗಳಲ್ಲಿರುವ ನಿಗಮಗಳನ್ನು ಮುಟ್ಟಲು ಹೋಗುವುದಿಲ್ಲ. ಆದರೆ ಸರ್ಕಾರದ ಬಹುತೇಕ ಇಲಾಖೆಗಳಲ್ಲಿ ಒಂದು ನಿಗಮದ ಜಾಗದಲ್ಲಿ ಹಲವು ನಿಗಮಗಳಿದ್ದು, ಇವನ್ನು ವಿಲೀನಗೊಳಿಸಿ ಆಯಾ ಇಲಾಖೆಯಲ್ಲಿ ಒಂದೇ ನಿಗಮವಿರುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...