Wednesday, August 26, 2026
Wednesday, August 26, 2026

ಮೊಬೈಲ್ ಸಂದೇಶವನ್ನ ನಂಬಿ ಮೋಸ ಹೋದ ಕೃಷಿಕ

Date:

ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ತಡಗಳಲೆ ಗ್ರಾಮದ ಮಲ್ಲೇಶ್‌ರಿಗೆ ವ್ಯಾಪಾರ ಮಾಡಲು ಸಬ್ಸಿಡಿ ದರದಲ್ಲಿ ಸಾಲ ಕೊಡುವುದಾಗಿ ವಂಚಿಸಿದ ಪ್ರಕರಣ ಸಾಗರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.

ಮಲ್ಲೇಶ್ ಎಂಬುವವರ ಮೊಬೈಲ್‌ಗೆ ಶೇ. 50 ರ ಸಬ್ಸಿಡಿ ದರದಲ್ಲಿ ವ್ಯಾಪಾರಕ್ಕೆ ಸಾಲ ಕೊಡುವುದಾಗಿ ಸಂದೇಶ ಬಂದಿತ್ತು.

ಈ ಸಂದೇಶ ಗಮನಿಸಿದ ಕೃಷಿಕ ಸಂದೇಶ ಕಳುಹಿಸಿದ ದೂರವಾಣಿ ಸಂಖ್ಯೆಗೆ ಕರೆ ಮಾಡಿದ್ದಾರೆ. ಸಬ್ಸಿಡಿ ಬೇಕಾದಲ್ಲಿ ರಿಜಿಸ್ಟರ್ ಮಾಡಬೇಕು. ಇದಕ್ಕಾಗಿ 7,200 ರೂ. ಹಣ ಕಟ್ಟಬೇಕೆಂದಿದ್ದಾರೆ.
ಕೃಷಿಕ ಪೋನ್ ಪೇ ಮೂಲಕ ಹಣ ಪಾವತಿಸಿದ್ದಾರೆ. ಮತ್ತೆ ಕರೆ ಮಾಡಿ ತೆರಿಗೆ ಬಾಬತ್ತು ಎಂದು 22,600 ರೂ. ಪಡೆದಿದ್ದಾರೆ.

ಅಂತಿಮವಾಗಿ ಆರ್‌ಬಿಐ ತೆರಿಗೆಯನ್ನೂ ನೀವು ಕಟ್ಟಬೇಕಾಗುತ್ತದೆ ಎಂದು ಹೇಳಿಕೊಂಡು 30,700 ರೂ. ಹಣ ಪಾವತಿಸಿಕೊಂಡಿದ್ದಾರೆ. ಒಟ್ಟು 60,500 ರೂ. ಹಣ ಪಡೆದುಕೊಂಡ ವ್ಯಕ್ತಿ ನಂತರ ಕರೆ ಸ್ವೀಕರಿಸದೆ ಇರುವುದರಿಂದ ಕೃಷಿಕ ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು, ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...