Thursday, March 26, 2026
Thursday, March 26, 2026

ಲೋಕಸಭಾಕ್ಷೇತ್ರದಲ್ಲಿ ಕಾಲುಸಂಕ: ಸಂಸದರಿಂದ ವರಿಷ್ಠರ ಭೇಟಿ

Date:

ಮಲೆನಾಡು ಪ್ರದೇಶಗಳಲ್ಲಿ ಕಾಲುಸಂಕ ನಿರ್ಮಾಣ, ಅಂಗನವಾಡಿ ಕೇಂದ್ರಗಳ ರಕ್ಷಣೆಗೆ ಅಗತ್ಯ ಅನುದಾನ ಬಿಡುಗಡೆಗೊಳಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಇಂದು ದೆಹಲಿಯಲ್ಲಿ ಕೇಂದ್ರ ಗ್ರಾಮೀಣಾಭಿವೃದ್ದಿ & ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಯಾದವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 634 ಕಾಲು ಸಂಕಗಳನ್ನು ನಿರ್ಮಾಣ ಮಾಡುವುದಕ್ಕೆ ಮತ್ತು ಲೋಕಸಭಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಸೂಕ್ತ ರಕ್ಷಣೆ ಒದಗಿಸಲು, 805 ಅಂಗನವಾಡಿ ಕೇಂದ್ರಗಳ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನ ನೀಡುವಂತೆ ಸಮಾಲೋಚಿಸಿರುವುದಾಗಿ ಅವರು ತಿಳಿಸಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರವು ಪಶ್ಚಿಮ ಘಟ್ಟಗಳ ಪರ್ವತ ಶ್ರೇಣಿ ಮತ್ತು ಮಲೆನಾಡು ಪ್ರದೇಶವನ್ನು ಒಳಗೊಂಡಿರುವ ವಿಶಿಷ್ಟವಾದ ಭೂಸ್ವರೂಪವನ್ನು ಹೊಂದಿರುವ ಶಿವಮೊಗ್ಗ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಲೆನಾಡು ಪ್ರದೇಶಗಳಲ್ಲಿ ಅಂದಾಜು 4954 ಕುಗ್ರಾಮಗಳಿದ್ದು, ಮಾನವ ವಾಸವು ಚದುರಿದ ಮತ್ತು ಗುಡ್ಡಗಾಡು ಪರ್ವತಗಳಲ್ಲಿ ವಾಸಿಸುವ ಹಾಗೂ ಮಳೆಗಾಲದಲ್ಲಿ ತುಂಬಿ ಹರಿಯುವ ಸಣ್ಣ ತೊರೆಗಳನ್ನು ಶಾಲಾ ಮಕ್ಕಳು ಸ್ಥಳೀಯ ಕಾಲು ಸೇತುವೆಗಳ ಮೇಲೆ ದಾಟುವುದು ಕಷ್ಟಕರ ಮತ್ತು ಸವಾಲಿನದ್ದಾಗಿದ್ದು, ಅಸಮರ್ಪಕ ರಸ್ತೆ ಸಂಪರ್ಕದಿಂದ ಜನ ಮತ್ತು ಜಾನುವಾರುಗಳು ಪ್ರಾಣ ಕಳೆದುಕೊಂಡ ನಿದರ್ಶನಗಳಿವೆ.

ಅಲ್ಲದೇ ಜನರು ತಮ್ಮ ಸ್ಥಳಗಳಿಗೆ ತಲುಪಲು ದೂರದ ಪ್ರಯಾಣವನ್ನು ತಡೆಯಲು ಮಕ್ಕಳಿಗೆ ಮತ್ತು ನಾಗರೀಕರಿಗೆ ಸೂಕ್ತವಾದ ರಕ್ಷಣೆಯನ್ನು ನೀಡಬೇಕಾಗಿರುವ ಕುರಿತು ಅಧ್ಯಕ್ಷರಿಗೆ ಮನವರಿಕೆ ಮಾಡಿಕೊಡಲಾಗಿದೆ ಹಾಗೂ ಈ ಬಗ್ಗೆ ಸಮಿತಿ ಅಧ್ಯಕ್ಷರು ಸಕಾರಾತ್ಮಕವಾಗಿ ಸ್ಪಂದಿಸಿ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿರುವುದಕ್ಕೆ ಸಂಸದರು ಕೇಂದ್ರ ಗ್ರಾಮೀಣಾಭಿವೃದ್ದಿ & ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಯಾದವ್ ಅವರಿಗೆ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...