Sunday, December 14, 2025
Sunday, December 14, 2025

ಲೋಕಸಭಾಕ್ಷೇತ್ರದಲ್ಲಿ ಕಾಲುಸಂಕ: ಸಂಸದರಿಂದ ವರಿಷ್ಠರ ಭೇಟಿ

Date:

ಮಲೆನಾಡು ಪ್ರದೇಶಗಳಲ್ಲಿ ಕಾಲುಸಂಕ ನಿರ್ಮಾಣ, ಅಂಗನವಾಡಿ ಕೇಂದ್ರಗಳ ರಕ್ಷಣೆಗೆ ಅಗತ್ಯ ಅನುದಾನ ಬಿಡುಗಡೆಗೊಳಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಇಂದು ದೆಹಲಿಯಲ್ಲಿ ಕೇಂದ್ರ ಗ್ರಾಮೀಣಾಭಿವೃದ್ದಿ & ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಯಾದವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 634 ಕಾಲು ಸಂಕಗಳನ್ನು ನಿರ್ಮಾಣ ಮಾಡುವುದಕ್ಕೆ ಮತ್ತು ಲೋಕಸಭಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಸೂಕ್ತ ರಕ್ಷಣೆ ಒದಗಿಸಲು, 805 ಅಂಗನವಾಡಿ ಕೇಂದ್ರಗಳ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನ ನೀಡುವಂತೆ ಸಮಾಲೋಚಿಸಿರುವುದಾಗಿ ಅವರು ತಿಳಿಸಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರವು ಪಶ್ಚಿಮ ಘಟ್ಟಗಳ ಪರ್ವತ ಶ್ರೇಣಿ ಮತ್ತು ಮಲೆನಾಡು ಪ್ರದೇಶವನ್ನು ಒಳಗೊಂಡಿರುವ ವಿಶಿಷ್ಟವಾದ ಭೂಸ್ವರೂಪವನ್ನು ಹೊಂದಿರುವ ಶಿವಮೊಗ್ಗ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಲೆನಾಡು ಪ್ರದೇಶಗಳಲ್ಲಿ ಅಂದಾಜು 4954 ಕುಗ್ರಾಮಗಳಿದ್ದು, ಮಾನವ ವಾಸವು ಚದುರಿದ ಮತ್ತು ಗುಡ್ಡಗಾಡು ಪರ್ವತಗಳಲ್ಲಿ ವಾಸಿಸುವ ಹಾಗೂ ಮಳೆಗಾಲದಲ್ಲಿ ತುಂಬಿ ಹರಿಯುವ ಸಣ್ಣ ತೊರೆಗಳನ್ನು ಶಾಲಾ ಮಕ್ಕಳು ಸ್ಥಳೀಯ ಕಾಲು ಸೇತುವೆಗಳ ಮೇಲೆ ದಾಟುವುದು ಕಷ್ಟಕರ ಮತ್ತು ಸವಾಲಿನದ್ದಾಗಿದ್ದು, ಅಸಮರ್ಪಕ ರಸ್ತೆ ಸಂಪರ್ಕದಿಂದ ಜನ ಮತ್ತು ಜಾನುವಾರುಗಳು ಪ್ರಾಣ ಕಳೆದುಕೊಂಡ ನಿದರ್ಶನಗಳಿವೆ.

ಅಲ್ಲದೇ ಜನರು ತಮ್ಮ ಸ್ಥಳಗಳಿಗೆ ತಲುಪಲು ದೂರದ ಪ್ರಯಾಣವನ್ನು ತಡೆಯಲು ಮಕ್ಕಳಿಗೆ ಮತ್ತು ನಾಗರೀಕರಿಗೆ ಸೂಕ್ತವಾದ ರಕ್ಷಣೆಯನ್ನು ನೀಡಬೇಕಾಗಿರುವ ಕುರಿತು ಅಧ್ಯಕ್ಷರಿಗೆ ಮನವರಿಕೆ ಮಾಡಿಕೊಡಲಾಗಿದೆ ಹಾಗೂ ಈ ಬಗ್ಗೆ ಸಮಿತಿ ಅಧ್ಯಕ್ಷರು ಸಕಾರಾತ್ಮಕವಾಗಿ ಸ್ಪಂದಿಸಿ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿರುವುದಕ್ಕೆ ಸಂಸದರು ಕೇಂದ್ರ ಗ್ರಾಮೀಣಾಭಿವೃದ್ದಿ & ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಯಾದವ್ ಅವರಿಗೆ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...

Canara Bank ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.

Canara Bank ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಕೆನರಾ ಬ್ಯಾಂಕ್...