Sunday, May 25, 2025
Sunday, May 25, 2025

ಚೀನಾಗೆ ತಡವಾಗಿ ಮನವರಿಕೆ: ಕಾದಾಟದ ಬದಲು ಸಹಕಾರವಿರಲಿ-ವಾಂಗ್

Date:

ಭಾರತೀಯ ರಾಯಭಾರಿ ಪ್ರದೀಪ್ ಕುಮಾರ್ ರಾವತ್ ಅವರು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಬೀಜಿಂಗ್‌ನಲ್ಲಿ ಭೇಟಿಯಾದರು.

ಈ ಭೇಟಿಯ ಕುರಿತು ಚೀನಾ ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದೆ.
14ನೇ ಬ್ರಿಕ್ಸ್ ಶೃಂಗಸಭೆಗೂ ಮುನ್ನ ಹಾಗೂ ಪೂರ್ವ ಲಡಾಖ್‌ನಲ್ಲಿ ಕಳೆದ ಎರಡು ವರ್ಷಗಳ ಮಿಲಿಟರಿ ಬಿಕ್ಕಟ್ಟಿನ ಬಗ್ಗೆ ಇಬ್ಬರೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಚೀನಾ ಮತ್ತು ಭಾರತದ ಸಾಮಾನ್ಯ ಹಿತಾಸಕ್ತಿಗಳು ಭಿನ್ನಾಭಿಪ್ರಾಯಗಳನ್ನು ಮೀರಿಸುತ್ತವೆ ಎಂದು ವಾಂಗ್ ಹೇಳಿದ್ದಾರೆ. ಎರಡೂ ಕಡೆಯವರು ಪರಸ್ಪರರ ವಿರುದ್ಧ ಕಾವಲು ಕಾಯುವ ಬದಲು ಸಹಕಾರವನ್ನು ಬಲಪಡಿಸಬೇಕು ಮತ್ತು ಸುಧಾರಿಸಬೇಕು. ಒಬ್ಬರನ್ನೊಬ್ಬರು ಅನುಮಾನಿಸುವ ಬದಲು ಪರಸ್ಪರ ನಂಬಿಕೆಯಿಂದ ಇರಬೇಕು ಎಂದಿದ್ದಾರೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಕಳೆದ ಮಾರ್ಚ್‌ನಲ್ಲಿ ವಾಂಗ್ ಭಾರತಕ್ಕೆ ಭೇಟಿ ನೀಡಿದ್ದು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೊತೆ ಮಾತುಕತೆ ನಡೆಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N Gopinath ಮಥುರಾ ಪ್ಯಾರಡೈಸ್ಮಧುರ ಮಾತಿನ ಗೋಪಿನಾಥ್ ಗೆ”ಆತಿಥ್ಯ ರತ್ನ” ಪುರಸ್ಕಾರ

N Gopinath ಕರ್ನಾಟಕ ರಾಜ್ಯ ಹೋಟೆಲ್‌ ಸಂಘದ ಪ್ರತಿಷ್ಠಿತ ಪ್ರಶಸ್ತಿ "ಆತಿಥ್ಯರತ್ನ"ವನ್ನು...

Sagara News ಸಾಗರದ ಚರಕ ಅಂಗಡಿಯಲ್ಲಿ‌ಮೇ 26 ರಂದು‌ “ಅವ್ವ ಸಂತೆ”

Sagara News ಜೀವನ್ಮುಖಿ ಹಾಗೂ ಚರಕ ವತಿಯಿಂದ ದಿನಾಂಕ 26:05:25 ರ...