Thursday, February 13, 2025
Thursday, February 13, 2025

ಕೋಮು ಸೌಹಾರ್ದತೆ ರಕ್ಷಿಸಲು ಸೀಎಂ ಗೆ ಗಣ್ಯರ ಪತ್ರ

Date:

ಕರ್ನಾಟಕದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿ, ನಾಡನ್ನು ಸರ್ವ ಜನಾಂಗದ ಶಾಂತಿ ತೋಟವಾಗಿ ಮರು ಸ್ಥಾಪಿಸುವಂತೆ ಒತ್ತಾಯಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹಲವು ಗಣ್ಯರು ಪತ್ರ ಬರೆದಿದ್ದಾರೆ.

ಕೋಮು ಸೌಹಾರ್ದತೆಯ ವಿಷಯದಲ್ಲಿ ನಮ್ಮ ರಾಜ್ಯಕ್ಕೆ ಭವ್ಯ ಪರಂಪರೆಯಿದೆ. 1956 ರಲ್ಲಿ ಕರ್ನಾಟಕ ಏಕೀಕರಣವಾಯಿತು. ಆದರೆ ಕರ್ನಾಟಕದ ಮತೀಯ ಸೌಹಾರ್ದೆಯ ಇತಿಹಾಸ ಇದಕ್ಕಿಂತಲೂ ಹಳೆಯದು, 12 ನೇ ಶತಮಾನದಲ್ಲಿಯೇ ಕವಿ-ದಾರ್ಶನಿಕ ಬಸವಣ್ಣನವರ ಪ್ರಯತ್ನಗಳಿಂದ ಸಾಮಾಜಿಕ ಹಾಗೂ ಧಾರ್ಮಿಕ ಸುಧಾರಣೆಯಲ್ಲಿ ನಮ್ಮ ಕನ್ನಡ ನಾಡು ಸೌಹಾರ್ದೆಯ ಇತಿಹಾಸವನ್ನು ನಿರ್ಮಿಸಿದೆ.

ಸಮ್ಮಿಶ್ರ ಸಂಪ್ರದಾಯಗಳಿಗೆ ಹಿಂದು-ಮುಸ್ಲಿಂರನ್ನು ಒಳಗೊಂಡಂತೆ ಜನಸಮುದಾಯಗಳ ನಡುವೆ ಶಾಂತಿಯುತ ಸಹಬಾಳ್ವೆಗೆ ನಮ್ಮ ನಾಡಿನ ಇತಿಹಾಸ ಸಾಕ್ಷಿಯಾಗಿದೆ. ಈ ಭವಯ ಪರಂಪರೆಯ ಹಿನ್ನೆಲೆಯಲ್ಲಿ ನಮ್ಮ ರಾಷ್ಟ್ರಕವಿ ಕುವೆಂಪು ಅವರು ನೂರು ವರ್ಷಗಳಷ್ಟು ಹಿಂದೆಯೇ ಈ ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟ ಎಂದು ಬಣ್ಣಿಸಿದ್ದಾರೆ ಎಂದಿದ್ದಾರೆ.

ಶಾಂತಿ, ಸಹಬಾಳ್ವೆ, ವೈವಿದ್ಯತೆ, ಬಹುತ್ವಕ್ಕೆ ಹಸರಾಗಿದ್ದ ಈ ನಾಡಿನಲ್ಲಿ ಇವುಗಳನ್ನೆಲ್ಲ ನಾಶಗೊಳಿಸುವಂತಹ ಇತ್ತೀಚಿನ ಬೆಳವಣಿಗೆಗಳನ್ನು ನೋಡಿ ಲಕ್ಷಾಂತರ ನಾಗರಿಕರಂತೆ ನಾವೂ ಸಹ ತೀವ್ರವಾಗಿ ವ್ಯಾಕುಲಗೊಂಡಿದ್ದೇವೆ. ಇಂಥ ತಪ್ಪು ನಡೆಗಳನ್ನು ಸರಿಪಡಿಸಲು ಈಗಲೂ ಅವಕಾಶವಿದ್ದು, ಅದಕ್ಕೆ ಅಗತ್ಯವಾದ ಸಲಹೆಗಳನ್ನು ಸರ್ಕಾರಕ್ಕೆ ನೀಡುವುದು ನಾಗರಿಕರಾದ ನಮ್ಮ ಕರ್ತವ್ಯವೆಂದು ಭಾವಿಸಿ ಪತ್ರ ಬರೆಯುತ್ತಿದ್ದೇವೆ ಎಂದು ಉಲ್ಲೇಖಿಸಿದ್ದಾರೆ.

ಸಂಕುಚಿತ ಮತೀಯವಾದಿಗಳು ಹಾಗೂ ದ್ವೇಷಪೂರಿತ ಕೆಲ ವ್ಯಕ್ತಿಗಳು ಮತ್ತು ಗುಂಪುಗಳು ಧರ್ಮ ಮತ್ತು ಜಾತೀಯ ಆಧಾರದಲ್ಲಿ ಅಲ್ಪಸಂಖ್ಯಾತರನ್ನು ಪ್ರತ್ಯೇಕಿಸಿ ದೂರವಿಡುವ ಹಾಗೂ ಅವರನ್ನು ದಮನಗೊಳಿಸುವ ಕೃತ್ಯಗಳಲ್ಲಿ ತೊಡಗಿರುವುದು ಆತಂಕದ ವಿಷಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of School Education and Literacy ಸಚಿವ ಮಧು ಬಂಗಾರಪ್ಪ‌‌‌ ಅವರ ಜಿಲ್ಲಾ ಪ್ರವಾಸ ಮಾಹಿತಿ

Department of School Education and Literacy ಶಾಲಾ ಶಿಕ್ಷಣ ಮತ್ತು...

Indian Air Force ಮೃತ ಮಂಜುನಾಥ್ ಅವರ ಮನೆಗೆ ಸಚಿವ‌ ಮಧು‌‌ ಬಂಗಾರಪ್ಪ ಭೇಟಿ & ಕುಟುಂಬಕ್ಕೆ ಸಾಂತ್ವನ

Indian Air Force ಇತ್ತೀಚಿಗೆ ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದ ಭಾರತೀಯ...

Mankuthimmana Kagga ಸಾಗರದಲ್ಲಿ ಮಂಕು ತಿಮ್ಮನ‌ ಕಗ್ಗ ವಾಚನ & ಅರ್ಥ ವಿವರಣೆ ಸ್ಪರ್ಧೆ

Mankuthimmana Kagga ಸರಸ್ವತಿ ಮೇಜರ್ ನಾಗರಾಜ್ ಕುಟುಂಬ ಕೊಟ್ಟಿರುವ ಡಿ...