Monday, May 19, 2025
Monday, May 19, 2025

ಕೋಮು ಸೌಹಾರ್ದತೆ ಕಳಿಕಳಿಯಿಂದ ಸೀಎಂ ಗೆ ಪತ್ರ ಬರೆದ ಸಾಹಿತಿ ಕಲಾವಿದರು

Date:

ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಬಂದಿದೆ. ಸಾರ್ವಜನಿಕ ಶಾಂತಿಯ ತೋಟವನ್ನು ಮರುಸ್ಥಾಪನೆ ಮಾಡಬೇಕಿದೆ ಎಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಸಾಹಿತಿಗಳು, ಚಿಂತಕರು ಸಿನಿ ಕ್ಷೇತ್ರದವರು ಹಾಗೂ ಎಡಪಂಥೀಯರು ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಚಲನ ಚಿತ್ರ ನಿರ್ದೇಶಕ ಬಿ.ಸುರೇಶ್, ಸಾಹಿತಿ ವೈದೇಹಿ, ಗಿರೀಶ್ ಕಾಸರವಳ್ಳಿ, ಗಾಯಕಿ ಎಂಡಿ ಪಲ್ಲವಿ, ವಸುಂಧರ ಭೂಪತಿ, ನಾಗೇಶ್ ಹೆಗ್ಡೆ ಸೇರಿದಂತೆ ವಿವಿಧ ಕ್ಷೇತ್ರಗಳ 75 ಮಂದಿ ಪತ್ರ ಬರೆದಿದ್ದಾರೆ.

ನಾವು ಕರ್ನಾಟಕದಲ್ಲಿ ನೆಲೆಸಿರುವ ವಿವಿಧ ಕ್ಷೇತ್ರ ಮತ್ತು ವೃತ್ತಿಗಳಿಗೆ ಸೇರಿದ ಸಾರ್ವಜನಿಕ ಕಳಕಳಿಯುಳ್ಳ ನಾಗರಿಕರಾಗಿದ್ದೇವೆ. ಶಾಂತಿ, ಸಹಬಾಳ್ವೆ, ವೈವಿದ್ಯತೆ, ಬಹುತ್ವಕ್ಕೆ ಹೆಸರಾಗಿದ್ದ ಈ ನಾಡಿನಲ್ಲಿ ಇವುಗಳನ್ನೆಲ್ಲ ನಾಶಗೊಳಿಸುವಂತಹ ಇತ್ತೀಚಿನ ಬೆಳವಣಿಗೆಗಳನ್ನು ನೋಡಿ ಲಕ್ಷಾಂತರ ನಾಗರಿಕರಂತೆ ನಾವೂ ಸಹ ತೀವ್ರವಾಗಿ ವ್ಯಾಕುಲಗೊಂಡಿದ್ದೇವೆ. ಇಂತಹ ತಪ್ಪು ನಡೆಗಳನ್ನು ಸರಿಪಡಿಸಲು ಈಗಲೂ ಅವಕಾಶವಿದ್ದು ಅದಕ್ಕೆ ಅಗತ್ಯವಾದ ಸಲಹೆಗಳನ್ನು ಸರ್ಕಾರಕ್ಕೆ ನೀಡುವುದು ನಾಗರಿಕರಾದ ನಮ್ಮ ಕರ್ತವ್ಯವೆಂದು ಭಾವಿಸಿ ಈ ಪತ್ರವನ್ನು ತಮಗೆ ಸಲ್ಲಿಸುತ್ತಿದ್ದೇವೆ ಎಂದು ಪತ್ರದಲ್ಲಿ ಕರ್ನಾಟಕದ ಹಿರಿಯ ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿಗೆ ನಡೆದ ‘ಬಸವ ಜಯಂತಿ – 2022’ ಸಂದರ್ಭದಲ್ಲಿ ಬಸವಣ್ಣನವರ ಕನಸಿನ ಸಮಾನತೆಯ ಸೌಹಾರ್ದಯುತ ಸಮಾಜವನ್ನು ಕಟ್ಟುವುದು ನಮ್ಮ ಗುರಿ ಎಂದು ಸರ್ಕಾರದ ಜಾಹಿರಾತಿನಲ್ಲಿ ಪ್ರಕಟಿಸಲಾಗಿದೆ. ಸಾಮಾಜಿಕ ಸೌಹಾರ್ದತೆ, ಬ್ರಾತೃತ್ವ, ಏಕತೆ ಮತ್ತು ಅಂತಃಕರಣಕ್ಕೆ ಬಸವಣ್ಣನವರು ಒತ್ತು ನೀಡಿದ್ದರು ಎನ್ನುವ ನಮ್ಮ ಪ್ರಧಾನ ಮಂತ್ರಿಯವರ ಮಾತುಗಳನ್ನು ಸಹ ಇದರ ಜೊತೆ ಉದ್ಧರಿಸಲಾಗಿದೆ. ಈ ಸಂದರ್ಭದಲ್ಲಿ ಸರ್ಕಾರವು ಪವಿತ್ರ ರಂಜಾನ್ ಈದ್ ಉಲ್ ಫಿತರ್ ಹಬ್ಬವನ್ನು ಬಸವ ಜಯಂತಿಯಂತೆಯೇ ಆಚರಿಸಿ ಸತತವಾಗಿ ಕೋಮು ದ್ವೇಷಿಗಳ ದಾಳಿಗೆ ತುತ್ತಾಗುತ್ತಿರುವ ಮುಸ್ಲಿಂ ನಾಗರಿಕರನ್ನು ಉದ್ದೇಶಿಸಿ ಅವರ ರಕ್ಷಣೆ ಮತ್ತು ಸುರಕ್ಷತೆ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದರೆ ಅದು ಮತ್ತಷ್ಟು ಹೃದಯ ಸ್ಪರ್ಶಿಯಾಗುತ್ತಿತ್ತು.

ಶಾಂತಿ ಸೌಹಾರ್ದತೆ ಮತ್ತು ನ್ಯಾಯದಾನ ನೀಡುವ ಹೊಣೆಗಾರಿಕೆಯನ್ನು ಕರ್ನಾಟಕ ಸರ್ಕಾರವು ನಿರ್ವಹಿಸುತ್ತದೆ ಎನ್ನುವ ನಂಬಿಕೆಯಿಂದ ನಾವು ಮುಖ್ಯಮಂತ್ರಿಗಳಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವ ಮೂಲಕ ಎಲ್ಲ ನಾಗರಿಕರ ಸೌಖ್ಯ ಮತ್ತು ವಿಶ್ವಾಸವನ್ನು ಪುನರ್ ಪ್ರತಿಷ್ಠಾಪಿಸಬೇಕೆಂದು ಮನವಿ ಮಾಡಿ ಕೊಳ್ಳುತ್ತೇವೆ ಎಂದಿದ್ದಾರೆ.

ಕರ್ನಾಟಕದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಬಗ್ಗೆ ಕಾಳಜಿ ಹಾಗೂ ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ತುರ್ತಾಗಿ ಮರುಸ್ಥಾಪಿಸುವುದರ ವಿಷಯದ ಬಗ್ಗೆ ಬರೆಯಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Guarantee scheme ಜನ ಸಾಮಾನ್ಯರ ಬದುಕಿಗೆ ಗ್ಯಾರಂಟಿ ಯೋಜನೆಗಳು ಬೆಳಕಾಗಿವೆ

Guarantee scheme ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ನಾಡಿನ...

Klive Special Article ಭಯೋತ್ಪಾದನೆ‌ ಜಾಗತಿಕ ಜಾಗೃತಿಗೆಸರ್ವಸಮ್ಮತ ಸರ್ವಪಕ್ಷ‌ ನಿಯೋಗ.

Klive Special Article ಪೆಹಲ್ಗಾಂ ದುರಂತದ ನಂತರ ನಡೆದ ಬೆಳವಣಿಗೆಗಳಲ್ಲಿಮೂರು ಸಂಗತಿಗಳು ಸುದ್ದಿಮನೆಯನ್ನ...

Rajesh Keelambi “ಶಾಖಾಹಾರಿ” ನಿರ್ಮಾಪಕ ರಾಜೇಶ್ ಕೀಳಂಬಿ‌ ಅವರಿಗೆಡಾ.ಪುನೀತ್ ರಾಜ್ ಕುಮಾರ್ ಚೊಚ್ಚಲ ನಿರ್ಮಾಪಕ  ಪ್ರಶಸ್ತಿ

Rajesh Keelambi ಶಾಖಾಹಾರಿ ಚಿತ್ರದ ನಿರ್ಮಾಪಕಕೀಳಂಬಿ‌ ಮೀಡಿಯಾ ಲ್ಯಾಬ್ ಸಂಸ್ಥೆಯ ಎಂ.ಡಿ....

Shimog News ಹಿರಿಯೂರು ಕೃಷ್ಣಮೂರ್ತಿ ಸ್ಮರಣೀಯ ವ್ಯಕ್ತಿ,- ದತ್ತಾತ್ರೇಯ ಹೊಸಬಾಳೆ

Shimog News ತಾ.17-5-25 ರ ಶನಿವಾರ ಸಂಜೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ...