Friday, February 14, 2025
Friday, February 14, 2025

ವಾಯುಪಡೆಯಲ್ಲಿ ಅಗ್ನಿಪಥ ನೇಮಕಾತಿಪ್ರಕ್ರಿಯೆ ಆರಂಭ

Date:

ಭಾರತೀಯ ವಾಯುಪಡೆಯು ಕೇಂದ್ರ ಸರ್ಕಾರದ ಹೊಸ ಯೋಜನೆ ‘ಅಗ್ನಿಪಥ’ ಅಡಿಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ.

ಜೂನ್‌ 24ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ 5ರ ವರೆಗೆ ಅರ್ಜಿಸಲ್ಲಿಸಬಹುದಾಗಿದೆ.
ಜುಲೈ 24ರಂದು ಆನ್‌ಲೈನ್‌ ಮೂಲಕ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ಹೊರಡಿಸಿದೆ.

ಆನ್‌ಲೈನ್‌ ಟೆಸ್ಟ್‌, ದೈಹಿಕ್ಷ ಕ್ಷಮತೆ ಪರೀಕ್ಷೆ (ಪಿಇಟಿ), ಹೊಂದಾಣಿಕೆ ಮಟ್ಟದ ಎರಡು ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
‘1999ರ ಡಿಸೆಂಬರ್‌ 29 ಹಾಗೂ 2005ರ ಜೂನ್‌ 29ರ ನಡುವೆ ಜನಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅಭ್ಯರ್ಥಿಯು ಒಂದು ವೇಳೆ ಆಯ್ಕೆ ಪ್ರಕ್ರಿಯೆಯ ಎಲ್ಲ ಹಂತಗಳನ್ನೂ ಪೂರ್ಣಗೊಳಿಸಿದರೆ, ದಾಖಲು ಮಾಡಿದ ದಿನಕ್ಕೆ ಗರಿಷ್ಠ ವಯೋಮಿತಿ 23 ವರ್ಷ ಇರಬೇಕು ಎಂದು ಐಎಎಫ್‌ ಪ್ರಕಟಣೆಯಲ್ಲಿ ತಿಳಿಸಿದೆ.

1950ರ ವಾಯುಪಡೆ ಕಾಯ್ದೆ ಅಡಿಯಲ್ಲಿ ಅಗ್ನಿವೀರರನ್ನು ನಾಲ್ಕು ವರ್ಷಗಳ ಅವಧಿಗೆ ದಾಖಲಿಸಿಕೊಳ್ಳಲಾಗುತ್ತದೆ. ಅಗ್ನಿವೀರರಿಗೆ ವಾಯುಪಡೆಯಲ್ಲಿ ಸದ್ಯ ಇರುವ ಶ್ರೇಣಿಗಳಿಗಿಂತ ವಿಭಿನ್ನವಾದ ಶ್ರೇಣಿ ನೀಡಲಾಗುತ್ತದೆ. ನಾಲ್ಕು ವರ್ಷಗಳ ನಿಗದಿತ ಒಪ್ಪಂದದ ಅವಧಿಯನ್ನು ಮೀರಿ, ವಾಯುಪಡೆಯು ಅಗ್ನಿವೀರರನ್ನು ಮುಂದುವರಿಸುವುದಿಲ್ಲ’ ಎಂದೂ ಸ್ಪಷ್ಟಪಡಿಸಿದೆ.

‘ಅಗ್ನಿಪಥ’ ಯೋಜನೆಯನ್ನು ಜೂನ್‌ 14ರಂದು ಪ್ರಕಟಿಸಿದ್ದ ಕೇಂದ್ರ ಸರ್ಕಾರ, ಹದಿನೇಳೂವರೆ ವರ್ಷದಿಂದ 21 ವರ್ಷದೊಳಗಿನವರು ನೇಮಕಾತಿಗೆ ಅರ್ಹರು ಎಂದು ಹೇಳಿತ್ತು. ಆದರೆ, ಯೋಜನೆಗೆ ಪ್ರತಿಭಟನೆಗಳು ವ್ಯಕ್ತವಾದ ಬೆನ್ನಲ್ಲೇ, ಗರಿಷ್ಠ ವಯೋಮಿತಿಯನ್ನು ಪರಿಷ್ಕರಿಸಿ 23 ವರ್ಷಕ್ಕೆ ಹೆಚ್ಚಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga City Corporation ಕೆಎಫ್ ಡಿ ಬಗ್ಗೆ ಅರಿವು ಮೂಡಿಸಿ,ಪ್ರಕರಣ ಹೆಚ್ಚದಂತೆ ಗಮನವಹಿಸಿ- ವಿ.ಎಸ್.ರಾಜೀವ್

Shivamogga City Corporation ಶಿವಮೊಗ್ಗ ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣಗಳು ಹೆಚ್ಚದಂತೆ...

Rapido Bike ಶಿವಮೊಗ್ಗಕ್ಕೂ ಎಂಟ್ರಿ ಕೊಟ್ಟ ರ್ಯಾಪಿಡೊ ಬೈಕ್

Rapido Bike ಶಿವಮೊಗ್ಗ ನಗರದಲ್ಲಿ ರ್ಯಾಪಿಡೋ ಬೈಕ್ ಓಡಾಟ ಶುರುವಾಗಿದೆ.ರ್ಯಾಪಿಡೋ...

MESCOM ಫೆ.14. ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರದ ಆಲ್ಕೋಳ ವಿ.ವಿ.ಕೇಂದ್ರದಿಂದ ತುರ್ತು ಕಾಮಗಾರಿ ಇರುವುದರಿಂದ ಫೆ.14...

Shri Sewalal Jayanti ಶ್ರೀ ಸೇವಾಲಾಲ್ ಜಯಂತಿಗೆ ಸರ್ವ ಸಿದ್ಧತೆ

Shri Sewalal Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ,...