Thursday, July 9, 2026
Thursday, July 9, 2026

ಪದವಿ ಗಳಿಕೆ ಜೀವನದ ಸಾಧನೆಯ ಆರಂಭ ಆದರೆ ಕೊನೆಯಲ್ಲ

Date:

ಪದವಿಯಿಂದ ಜ್ಞಾನ ಪಡೆಯಬಹುದು ಆದರೆ ಕೌಶಲ್ಯ ಬೇಕೆಂದರೆ ಪ್ರಾಯೋಗಿಕಾನುಭವ ಅವಶ್ಯ, ಆದ್ದರಿಂದಲೇ ನೂತನ ಶಿಕ್ಷಣ ನೀತಿಯು ಕೌಶಲ್ಯಕ್ಕೆ ಮಹತ್ವ ಕೊಟ್ಟಿದೆ ಎಂದು ಅಂತರರಾಷ್ಟ್ರೀಯ ವ್ವಕ್ತಿತ್ವಾಭಿವೃಧ್ಧಿ ತರಬೇತುದಾರ ಆರ್.ಎ.ಚೇತನ್ ರಾಮ್ ಅಭಿಪ್ರಾಯಪಟ್ಟರು.

ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಷನ್ ನ ಬಿಸಿಎ ಮತ್ತು ಬಿಕಾಂ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಾ ಸಕಾರಾತ್ಮಕ ಬದಲಾವಣೆಯು ನಿರಂತರವಾಗಿರಬೇಕು, ಇದೇ ನಿಜವಾದ ಪರಿವರ್ತನೆ, ಜ್ಞಾನವೇ ಶಕ್ತಿಯಾದರೂ ಪರಿವರ್ತನೆಗೆ ಕೌಶಲ್ಯವೂ ಅತ್ಯವಶ್ಯ, ಪದವಿ ಗಳಿಕೆಯು ಜೀವನದ ಸಾಧನೆಯ ಕೊನೆಯಲ್ಲ, ಇದು ಆರಂಭದ ಆರಂಭವಷ್ಟೇ ಎಂದರು. ನಾವೂ ಬದುಕ ಬೇಕು ಉಳಿದವರಿಗೂ ಬದುಕಲು ಬಿಡಬೇಕು, ನಾವಷ್ಟೇ ಸಂತೋಷವಾಗಿದ್ದರೆ ಸಾಲದು, ಇತರರೂ ಸಂತೋಷವಾಗಿರುವಂತೆ ಮಾಡಬೇಕು ಎಂದರು.

ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಕಾಲೇಜಿನ ಚೇರ್ಮನ್ ಅಥಣಿ ಎಸ್. ವೀರಣ್ಣನವರು ಮಾತನಾಡಿ ನೈಜತೆಯ ಅನುಭವದೊಂದಿಗೆ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡರೆ ಮಾತ್ರ ಭವಿಷ್ಯದಲ್ಲಿ ಅವಕಾಶಗಳ ಲಭ್ಯತೆ ಸಾಧ್ಯ ಎಂದರು.

ಪ್ರಾಂಶುಪಾಲ ಡಾ.ಬಿ.ವೀರಪ್ಪನವರು ಪ್ರಾಸ್ತಾವಿಕ ಮಾತುಗಳನ್ನಾಡಿ ದರು. ಫ್ರೊ.ಡಿ.ಎಂ.ಸ್ವಾತಿ ಸ್ವಾಗತ ಕೋರಿದರು. ಫ್ರೊ.ಕೆ.ಎಸ್.ಮುನವಳ್ಳಿ ಮಠ್ ಹಾಗೂ ಫ್ರೊ.ಕೆ.ಸಿಧ್ಧಲಿಂಗಯ್ಯಸಿಧ್ಧಲಿಂಗಪ್ಪ ಮುಖ್ಯಅತಿಥಿಗಳ ಪರಿಚಯ ಮಾಡಿದರು.

ಫ್ರೊ.ಕೆ.ವೈ.ವೀರೇಂದ್ರ ಪ್ರತಿಜ್ಞಾವಿಧಿ ಬೋ ಧಿಸಿದರು. ದರ್ಶನ್,ಅನುಷಾ,ಅಭಿಷೇಕ್ ಮತ್ತು ನಯನಾ ನಿರೂಪಿಸಿದರೆ ಪ್ರಾರ್ಥನೆಯನ್ನು ಸಂಧ್ಯಾ ಮತ್ತು ಸಂಗಡಿಗರು ಹಾಡಿದರು. ವಂದನೆಗಳನ್ನು ಫ್ರೊ.ಎಲ್.ಎನ್.ಚೇತನಾ ಅರ್ಪಿಸಿದರು. ಎಂಬಿಎ ನಿರ್ದೇಶಕ ಡಾ.ಸ್ವಾಮಿ ತ್ರಿಭುವನಾನಂದ ಮುಂತಾದವರು ಉಪಸ್ಥಿತರಿದ್ದರು.

ವರದಿ ಹಾಗೂ ಚಿತ್ರ : ಎಚ್.ಬಿ.ಮಂಜುನಾಥ.ದಾವಣಗೆರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...