Monday, May 18, 2026
Monday, May 18, 2026

ಮಹಾರಾಷ್ಟ್ರದಲ್ಲಿ ಬಂಡು ಶಾಸಕರ ಕುಟುಂಬಗಳ ಭದ್ರತೆ ಹಿಂಪಡೆಯಲಾಗಿದೆ

Date:

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿರುವ ಬಂಡಾಯ ಶಾಸಕರ ಕುಟುಂಬದವರಿಗೆ ನೀಡಿದ್ದ ಭದ್ರತೆಯನ್ನು ಅಲ್ಲಿನ ಸರ್ಕಾರ ಹಿಂಪಡೆದಿದೆ. ಈ ಕ್ರಮವನ್ನು ಅಮರಾವತಿ ಸಂಸದೆ ನವನೀತ್‌ ರಾಣಾ ಟೀಕಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಣಾ ಅವರು, ‘ಉದ್ಧವ್‌ ಠಾಕ್ರೆ ಸರ್ಕಾರ ತೊರೆದು, ತಮ್ಮದೇ ನಿರ್ಧಾರ ಕೈಗೊಂಡಿರುವ ಹಾಗೂ ಬಾಳಾ ಸಾಹೇಬರ ಚಿಂತನೆಗಳಿಗೆ ಬದ್ಧವಾಗಿರುವ ಶಾಸಕರ ಕುಟುಂಬಗಳಿಗೆ ಭದ್ರತೆ ಒದಗಿಸುವಂತೆ ಅಮಿತ್‌ ಶಾ ಅವರಲ್ಲಿ ಮನವಿ ಮಾಡುತ್ತೇನೆ.
ಉದ್ಧವ್‌ ಠಾಕ್ರೆ ಅವರ ಗೂಂಡಾಗಿರಿ ಕೊನೆಯಾಗಬೇಕು. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ವಿನಂತಿಸುತ್ತೇನೆ’ ಎಂದು ಹೇಳಿರುವುದಾಗಿ ಎಎನ್‌ಐ ಟ್ವೀಟ್ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಶಿವಸೇನಾದ ಪುಣೆ ನಗರ ಘಟಕದ ಮುಖ್ಯಸ್ಥ ಸಂಜಯ್‌ ಮೋರೆ, ‘ನಮ್ಮ ಪಕ್ಷದ ಕಾರ್ಯಕರ್ತರು ತಾನಾಜಿ ಸಾವಂತ್‌ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ನಮ್ಮು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ತೊಂದರೆ ನೀಡುತ್ತಿರುವ ಎಲ್ಲಾ ಬಂಡಾಯ ಶಾಸಕರು ಇಂತಹ ಸಮಸ್ಯೆಗಳನ್ನು ಎದುರಿಸಲಿದ್ದಾರೆ. ಅವರ ಕಚೇರಿಗಳ ಮೇಲೂ ದಾಳಿ ನಡೆಸಲಾಗುತ್ತದೆ. ಇದರಿಂದ ಯಾರೂ ತಪ್ಪಿಸಿಕೊಳ್ಳಲಾರರು’ ಎಂದು ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ನಿಗದಿತ ಅವಧಿಯೊಳಗೆ ಅತ್ಯಂತ ಗುಣಮಟ್ಟದಲ್ಲಿ ಕಾಮಗಾರಿಗಳನ್ನ ಪೂರ್ಣಗೊಳಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ತಾಳಗುಪ್ಪ ಹೋಬಳಿ ಮರತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಹಳ್ಳಿ...

MESCOM ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ 19 ಜನ ಸಂಪರ್ಕ ಸಭೆ

MESCOM ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ 19 ರಂದು...

B.Y. Vijayendra ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ: ಭಂಡತನದ ಪರಾಕಾಷ್ಠತೆ- ಬಿ.ವೈ.ವಿಜಯೇಂದ್ರ

B.Y. Vijayendra ಯಾವ ಮಹತ್ಸಾಧನೆಗಾಗಿ ಕಾಂಗ್ರೆಸ್ ‌ ಸರ್ಕಾರ ಮೂರು ವರ್ಷದ...